ನವದೆಹಲಿ: ಜನವರಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸೈರಿಲ್ ರಮಫೋಸ ಅವರು ಆಗಮಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಈ ವರ್ಷದ ಫೆಬ್ರವರಿಯಲ್ಲಿ ಸೈರಿಲ್ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು, ನೆಲ್ಸನ್ ಮಂಡೇಲಾ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ ಇವರು, ಮಹಾನ್ ಗಾಂಧೀವಾದಿಯೂ ಹೌದು. ಲೆನಸಿಯಾದಲ್ಲಿ 5 ಸಾವಿರಮಂದಿಯೊಂದಿಗೆ ಇವರು ವಾರ್ಷಿಕ ‘ಗಾಂಧಿ ನಡೆ’ಯಲ್ಲಿ ಭಾಗಿಯಾಗಿದ್ದರು. ಇದೇ ಕಾರಣಕ್ಕೆ ಭಾರತ ಸರ್ಕಾರ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಮನವಿ ಮಾಡಿದೆ.
ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವಂತೆ ಭಾರತ ನೀಡಿದ ಆಹ್ವಾನವನ್ನು ಅವರು ತಕ್ಷಣವೇ ಸ್ವೀಕರಿಸಿದ್ದಾರೆ. ಗಾಂಧೀಜಿಯ 150ನೇ ಜನ್ಮ ವರ್ಷಾಚರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರ ಆಗಮನ ಮಹತ್ವ ಪಡೆದುಕೊಂಡಿದೆ.
ಇವರಿಗೂ ಮೊದಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನವನ್ನು ನೀಡಲಾಗಿತ್ತು, ಆದರೆ ಪೂರ್ವನಿಗದಿತ ವೇಳಾಪಟ್ಟಿಯ ಹಿನ್ನಲೆಯಲ್ಲಿ ಅವರು ಆಹ್ವಾನವನ್ನು ಪುರಸ್ಕರಿಸಿರಲಿಲ್ಲ.
source: indianexpress.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.