ಮುದ್ದೇನಹಳ್ಳಿ: ಶ್ರೀ ಸತ್ಯ ಸಾಯಿ ಬಾಬಾ ಅವರ 93ನೇ ಜನ್ಮ ದಿನೋತ್ಸವದ ಅಂಗವಾಗಿ ಶುಕ್ರವಾರ ಶಿಕ್ಷಣ, ಪರಿಸರ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಧಾರ್ಮಿಕ ಸೌಹಾರ್ದತೆ, ಕ್ರೀಡೆಯಲ್ಲಿ ಮಹತ್ವದ ಸಾಧನೆಯನ್ನು ಮಾಡಿದ ಸಾಧಕರಿಗೆ ‘ ಶ್ರೀ ಸತ್ಯ ಸಾಯಿ ಅವಾರ್ಡ್ ಫಾರ್ ಎಕ್ಸಲೆನ್ಸ್’ನ್ನು ನೀಡಿ ಗೌರವಿಸಲಾಯಿತು.
ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಲೋಕ ಸೇವಾ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಟ್ರಸ್ಟ್ ನ ಕಾರ್ಯವನ್ನು ಕೊಂಡಾಡಿದರು.
ಅಲ್ಲದೇ, ಭವಿಷ್ಯದ ಭಾರತದ ನೇತೃತ್ವವನ್ನು ಯುವಜನಾಂಗವೇ ವಹಿಸಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.