ಅಲ್ವರ್ : ನಮ್ಮ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆವೊಡ್ಡುತ್ತಿದ್ದವರು ಇಂದು ಭಿಕ್ಷೆ ಬೇಡುತ್ತಿದ್ದಾರೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ಥಾನಕ್ಕೆ ಟಾಂಗ್ ನೀಡಿದ್ದಾರೆ.
ರಾಜಸ್ಥಾನದ ಅಲ್ವಾರ್ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ಥಾನದ ಹೆಸರು ಹೇಳದೆಯೇ ಆ ದೇಶವನ್ನು ಕುಟುಕಿದ್ದಾರೆ.
ಅಲ್ಲದೇ, ತನ್ನ ತಾಯಿ ಹಾಗೂ ಜಾತಿಯ ಬಗ್ಗೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು, ಆ ಪಕ್ಷ ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದು, ಜಾತಿ ರಾಜಕೀಯದಲ್ಲಿ ತೊಡಗಿದೆ ಎಂದಿದ್ದಾರೆ.
‘ನಿನ್ನೆ ಮೊನ್ನೆಯವರೆಗೆ ನಮ್ಮ ಮೇಲೆ ಬಾಂಬ್ ಹಾಕುವುದಾಗಿ ಬೆದರಿಸುತ್ತಿದ್ದವರು ಇಂದು ಭಿಕ್ಷೆ ಬೇಡುತ್ತಿದ್ದಾರೆ. ನಮ್ಮ ತಂತ್ರಗಾರಿಕೆ ಇದಕ್ಕೆ ಕಾರಣ. ಈ ತಂತ್ರಗಾರಿಕೆಯ ಹಿಂದೆ ಇರುವುದು ಮೋದಿಯ ಜಾತಿಯಲ್ಲ, 120 ಕೋಟಿ ಭಾರತೀಯರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.