ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಡಿ.11 ರ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗೆಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು VHP ನಾಯಕ ರಾಮಭಾದ್ರಚಾರ್ಯ ಹೇಳಿದ್ದಾರೆ.
ಭಾನುವಾರ ಧರ್ಮಸಭಾವನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿ.11ರ ಬಳಿಕ ಉನ್ನತ ಮಟ್ಟದ ಸಭೆ ಜರುಗಲಿದ್ದು, ಈ ಸಭೆಯ ಬಳಿಕ ಮೋದಿ ಮಂದಿರ ನಿರ್ಮಾಣದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಮೋದಿ ಸಂಪುಟದ ಪ್ರಮುಖ ನಾಯಕರೊಬ್ಬರ ಬಳಿ ಈ ಬಗ್ಗೆ ನಾನು ಚರ್ಚೆ ನಡೆಸಿದ್ದು, ಮೋದಿ ಡಿ.11ರ ಬಳಿಕ ಉನ್ನತ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಶಿವಸೇನಾ, VHP, RSS ಅಯೋಧ್ಯಾ, ಬೆಂಗಳೂರು, ನಾಗ್ಪುರಗಳಲ್ಲಿ ಸಮಾವೇಶಗಳನ್ನು ಏಪ೯ಡಿಸಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ತಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.