ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದ ವೇಳೆ ಬಿಜೆಪಿಯ ಪರವಾಗಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಹಿರಂಗ ಪ್ರಚಾರದ ಕೊನೆಯ ದಿನವಾದ ನಿನ್ನೆ, ಅವರು ಅಲ್ಲಿನ ಜನರಿಗೆ ಹಲವಾರು ಭರವಸೆಗಳನ್ನು ನೀಡಿದ್ದಾರೆ.
ಹೈದರಾಬಾದ್ನಲ್ಲಿ ಪ್ರಚಾರ ಸಮಾವೇಶ ನಡೆಸಿ ಮಾತನಾಡಿದ ಅವರು, ಒಂದು ವೇಳೆ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ನ್ನು ಭಾಗ್ಯನಗರವಾಗಿ ಮತ್ತು ಕರೀಂನಗರವನ್ನು ಕರಿಪುರಂ ಆಗಿ ಬದಲಾಯಿಸುವುದಾಗಿ ತಿಳಿಸಿದ್ದಾರೆ.
ಇನ್ನೊಂದು ಸಮಾವೇಶದಲ್ಲಿ ನಿಜಾಮಬಾದ್ ಜಿಲ್ಲೆಯ ಹೆಸರನ್ನೂ ಬದಲಾಯಿಸುವುದಾಗಿ ತಿಳಿಸಿದ್ದಾರೆ.
ತೆಲಂಗಾಣದ ಜನರ ಭಾವನೆಗಳನ್ನು ಗೌರವಿಸುವ ಸಲುವಾಗಿ ಈ ನಗರಗಳ ಹೆಸರುಗಳನ್ನು ಬದಲಾಯಿಸುವುದಾಗಿ ಅವರು ತಿಳಿಸಿದ್ದಾರೆ.
ಯೋಗಿ ಅವರು ಈಗಾಗಲೇ ತಮ್ಮ ರಾಜ್ಯದ ಅಲಹಾಬಾದ್ನ್ನು ಪ್ರಯಾಗ್ರಾಜ್ ಆಗಿ, ಫೈಝಾಬಾದ್ನ್ನು ಅಯೋಧ್ಯಾವಾಗಿ ಬದಲಾಯಿಸಿದ್ದಾರೆ.
source: zeenews.india.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.