ನವದೆಹಲಿ: ಪ್ರತಿ ಮನೆಯಲ್ಲೂ ಎಲ್ಪಿಜಿ ಅಡುಗೆ ಅನಿಲ ಇರಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಉಜ್ವಲ ಯೋಜನೆ, ಮನೆ ಮನೆಯ ವಾಯು ಮಾಲಿನ್ಯವನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ನೂತನ ವರದಿ ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್), ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ, ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ, ‘ದಿ ಇಂಡಿಯ ಸ್ಟೇಟ್ ಲೆವೆಲ್ ಡಿಸೀಝ್ ಬರ್ಡನ್ ಇನಿಶೀಯೇಟಿವ್’ ವರದಿಯಲ್ಲಿ ಉಜ್ವಲ ಯೋಜನೆ ವಾಯುಮಾಲಿನ್ಯ ತಡೆಗೆ ಪ್ರಯೋಜನಕಾರಿಯಾಗುತ್ತಿದೆ ಎಂದಿದೆ.
2017ರಲ್ಲಿ ಭಾರತದಲ್ಲಿ ವಾಯು ಮಾಲಿನ್ಯಕ್ಕೆ 12.4 ಲಕ್ಷ ಮರಣಗಳು ಸಂಭವಿಸಿದ್ದು, ಇದರಲ್ಲಿ 4.8 ಲಕ್ಷ ಮರಣಗಳು ಮನೆ ಮನೆಯ ವಾಯು ಮಾಲಿನ್ಯದಿಂದಲೇ ಸಂಭವಿಸುತ್ತಿವೆ. ಆದರೆ ಪ್ರಸ್ತುತ ಭಾರತದಲ್ಲಿ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಪ್ರಯತ್ನಗಳು ನಡೆಸುಯುತ್ತಿವೆ. ಮನೆಗಳ ವಾಯುಮಾಲಿನ್ಯ ತಡೆಗೆ ಪ್ರಧಾನಿಯವರ ಉಜ್ವಲ ಯೋಜನೆ ದೊಡ್ಡ ಪಾತ್ರವನ್ನು ವಹಿಸುತ್ತಿದೆ ಎಂದಿದೆ.
source: www.newindianexpress.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.