ಶ್ರೀನಗರ: ಈ ವರ್ಷ ಜಮ್ಮು ಕಾಶ್ಮೀರದಲ್ಲಿ 225 ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ ಎಂದು ನಾರ್ದನ್ ಆರ್ಮಿ ಕಮಾಂಡರ್ ಲೆ.ಜ.ರಣ್ಬೀರ್ ಸಿಂಗ್ ಹೇಳಿದ್ದಾರೆ.
ಕಪೂರ್ತಲಾದಲ್ಲಿ ಸೈನಿಕ್ ಸ್ಕೂಲ್ಗೆ ಭೇಟಿ ನೀಡಿ ಮಾತನಾಡಿದ ಅವರು, ‘ಸರ್ಕಾರ ಮತ್ತು ಭದ್ರತಾ ಪಡೆಗಳು ತೆಗೆದುಕೊಂಡ ಹಲವಾರು ಕ್ರಮಗಳ ಫಲವಾಗಿ ಕಳೆದ ಕೆಲವು ತಿಂಗಳಲ್ಲಿ ಕಣಿವೆ ರಾಜ್ಯದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತಗೊಳ್ಳುವುದು ಅತ್ಯಂತ ಕಡಿಮೆಯಾಗಿದೆ’ ಎಂದಿದ್ದಾರೆ.
ಈಗಾಗಲೇ ಹಲವಾರು ಭಯೋತ್ಪಾದಕರನ್ನು ನೆಲಕ್ಕುರುಳಿಸಲು ಸೈನಿಕರು ಯಶಸ್ವಿಯಾಗಿದ್ದು, 2018ರಲ್ಲಿ ಇದುವರೆಗೆ 225 ಉಗ್ರರು ಹತ್ಯೆಯಾಗಿದ್ದಾರೆ’ ಎಂದಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಸ್ಥಳಿಯರು ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿಯನ್ನು ಭದ್ರತಾ ಪಡೆಗಳೊಂದಿಗೆ ಹಂಚಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
source: hindusthantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.