ನವದೆಹಲಿ: ಸಮರ್ಥ ಭ್ರಷ್ಟಾಚಾರ ಮತ್ತು ಅಸಮರ್ಥ ಸರ್ಕಾರಕ್ಕೆ ಕಾಂಗ್ರೆಸ್ ಮತ್ತು ಎಡಪಕ್ಷಗಳ ಆಡಳಿತ ಮಾದರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಕೇರಳ ಬಿಜೆಪಿ ಕಾರ್ಯಕರ್ತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಮಾತನಾಡಿದ ಅವರು, ಬಿಜೆಪಿಯದ್ದು ವೇಗದ ಮತ್ತು ಅಂತರ್ಗತ ಅಭಿವೃದ್ಧಿಯ ಮಾದರಿಯಾಗಿದೆ, ಇದು ಕಾಂಗ್ರೆಸ್ ಮತ್ತು ಎಡಪಕ್ಷಗಳ ಮಾದರಿಗಿಂತ ಭಿನ್ನವಾದುದಾಗಿದೆ ಎಂದಿದ್ದಾರೆ.
ಕಮ್ಯೂನಿಸ್ಟ್ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಿಂಸೆಗಳನ್ನು ತೀವ್ರವಾಗಿ ಖಂಡಿಸಿದ ಅವರು, ಬಿಜೆಪಿ ಕಾರ್ಯಕರ್ತರು ಜನರ ಪ್ರಬಲ ಧ್ವನಿಯಾಗುತ್ತಿದ್ದಾರೆ ಎಂದರು.
ರಾಜಕೀಯ ಹಿಂಸಾಚಾರದ ಕಟುಕತನವೇ ಆಗಿರಲಿ, ನಮ್ಮ ಕಾರ್ಯಕರ್ತರು ಜನರೊಂದಿಗೆ ಬಲಿಷ್ಠವಾಗಿ ನಿಂತಿದ್ದಾರೆ. ರಾಜಕೀಯ ಹಿಂಸಾಚಾರವನ್ನು ಬಲಿಷ್ಠವಾಗಿ ಎದುರಿಸುತ್ತಿದ್ದಾರೆ, ತಮ್ಮ ನಂಬಿಕೆಗಳಿಗಾಗಿ ತ್ಯಾಗವನ್ನೂ ಮಾಡಿದ್ದಾರೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಉಜ್ವಲ ಯೋಜನೆ, ಆಯುಷ್ಮಾನ್ ಯೋಜನೆಯಂತಹ ಮೂಲಸೌಕರ್ಯವನ್ನು ಅತ್ಯಂತ ವೇಗದಲ್ಲಿ ವಿಸ್ತರಣೆಗೊಳಿಸುತ್ತಿದೆ ಮತ್ತು ಪರಿವರ್ತನಾ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.