ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ನಿರಂತರ ಅಪಪ್ರಚಾರ ಮಾಡುತ್ತಿರುವ ಮತ್ತು ರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿರುವ ಕಾಂಗ್ರೆಸ್ನ ನಿಜಬಣ್ಣವನ್ನು ಬಯಲು ಮಾಡುವ ಸಲುವಾಗಿ ಡಿ.17ರಂದು(ಇಂದು) ಬಿಜೆಪಿ ದೇಶವ್ಯಾಪಿಯಾಗಿ ಸುಮಾರು 70 ಕಡೆಗಳಲ್ಲಿ ಸುದ್ದಿಗೋಷ್ಠಿಯನ್ನು ಆಯೋಜನೆಗೊಳಿಸಲು ನಿರ್ಧರಿಸಿದೆ.
‘ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪಿತೂರಿಯನ್ನು, ದೇಶದ ಭದ್ರತೆ ಜೊತೆ ಅದು ಆಡುತ್ತಿರುವ ಚೆಲ್ಲಾಟವನ್ನು ನಾವು ಬಯಲು ಮಾಡಲಿದ್ದೇವೆ. ರಫೆಲ್ ಡೀಲ್ ಬಗ್ಗೆ ಸುಪ್ರೀಂಕೋರ್ಟ್ ಹೇಳಿದ ಸತ್ಯವನ್ನು ಜನರ ಮುಂದಿಡಲಿದ್ದೇವೆ’ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಮತ್ತು ಪಕ್ಷದ ಮಾಧ್ಯಮ ಮುಖ್ಯಸ್ಥ ಅನಿಲ್ ಬಲುನಿ ಹೇಳಿದ್ದಾರೆ.
ಮೂಲಗಳ ಪ್ರಕಾರ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಗುಜರಾತ್ ಸಿಎಂ ವಿಜಯ್ ರೂಪಾಣಿ, ಅಸ್ಸಾಂ ಸಿಎಂ ಸರ್ಬಾನಂದ್ ಸೋನಾವಾಲ್ ಮುಂತಾದವರು ಗುವಾಹಟಿ, ಅಹ್ಮದಾಬಾದ್, ಜೈಪುರ, ಅಗರ್ತಾಲ ಮುಂತಾದ ಕಡೆಗಳಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.
source: indiatoday
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.