ನವದೆಹಲಿ: ರಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸತ್ಯ ಗೊತ್ತಿದ್ದರೂ ಬೇಕಂತಲೇ ಕಾಂಗ್ರೆಸ್ ಜನರನ್ನು ದಾರಿತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.
ಗಾಂಧಿ ಕುಟುಂಬವನ್ನು ಟೀಕಿಸಿರುವ ಅವರು, ಸುಪ್ರೀಂಕೋರ್ಟ್ನ ಆದೇಶವನ್ನು ಪಾಲನೆ ಮಾಡದೆ ಇವರು ಅತ್ಯಂತ ಅದ್ಭುತವಾದ ಮೊಂಡುತನವನ್ನು ತೊರಿಸುತ್ತಿದ್ದಾರೆ ಎಂದಿದ್ದಾರೆ.
‘ರಫೆಲ್ ಡೀಲ್ನ ದರಗಳ ಬಗ್ಗೆ ಗೊತ್ತಿದ್ದರೂ ಕಾಂಗ್ರೆಸ್ ಜನರನ್ನು ತಪ್ಪು ದಾರಿಗಿಳಿಸುವ ಪ್ರಯತ್ನವನ್ನು ಮಾಡುತ್ತಿದೆ. ಎನ್ಡಿಎ ಸರ್ಕಾರ ದರಗಳ ವರದಿಯನ್ನು ಸಿಎಜಿಗೆ ಒಪ್ಪಿಸಿದೆ. ಪಬ್ಲಿಕ್ ಅಕೌಂಟ್ಸ್ ಕಮಿಟಿ ಕೂಡ ಇದರನ್ನು ಪರಿಶೀಲಿಸಿದೆ’ ಎಂದಿದ್ದಾರೆ.
’ಭವಿಷ್ಯ ಕಾಲ, ಭೂತ ಕಾಲ, ವರ್ತಮಾನ ಕಾಲ ಹೀಗೆ ಎಲ್ಲಾ ವಿಧದಲ್ಲೂ ರಫೆಲ್ ಡೀಲ್ ಪ್ರಕ್ರಿಯೆಯ ಬಗ್ಗೆ ನಾವು ವಿವರಣೆ ನೀಡಿದ್ದೇವೆ’ ಎಂದಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಸರ್ಕಾರಕ್ಕೆ ಸಂದ ಜಯ ಎಂದು ಅವರು ವಿಶ್ಲೇಷಿಸಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.