ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ತೀವ್ರ ಸ್ವರೂಪದ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಸದಾ ವೈದ್ಯಕೀಯ ಆಸರೆಯಲ್ಲಿ ಇರಬೇಕಾದುದು ಅವರ ಇಂದಿನ ಅನಿವಾರ್ಯ. ಆದರೂ ನಿನ್ನೆ ಮೂಗಿಗೆ ಪೈಪ್ ಅಳವಡಿಸಿಕೊಂಡ ಸ್ಥಿತಿಯಲ್ಲೇ ಬಂದು ಅವರು ಎರಡು ಕಾಮಗಾರಿಗಳನ್ನು ವೀಕ್ಷಣೆ ಮಾಡಿದ್ದಾರೆ.
ದೆಹಲಿಯ ಏಮ್ಸ್ನಿಂದ ನಿನ್ನೆ ಪರಿಕ್ಕರ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆದರೆ ವಿರಾಮ ತೆಗೆದುಕೊಳ್ಳುವುದು ಅವಶ್ಯಕ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದರೂ ಲೆಕ್ಕಿಸದ ಪರಿಕ್ಕರ್, ಮಾಂಡೋವಿ ನದಿಯ ನಿರ್ಮಾಣ ಹಂತದ 2 ಸೇತುವೆಗಳನ್ನು ಪರಿಶೀಲಿಸಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಕೃಶವಾದ ದೇಹ, ಬಳಲಿದ ಮುಖ ಅವರ ಅನಾರೋಗ್ಯ ಎಂತಹುದು ಎಂಬುದನ್ನು ಸಾರಿ ಹೇಳುತ್ತದೆ. ಈ ನಡುವೆಯೂ ಅವರು ತಮ್ಮ ಜವಾಬ್ದಾರಿಯನ್ನು ಮರೆಯದೆ ಕರ್ತವ್ಯ ನಿರ್ವಹಣೆ ಮಾಡುತ್ತಿರುವುದು ಅವರ ಕರ್ತವ್ಯ ಪ್ರಜ್ಞೆಯನ್ನು ಸಾರಿ ಹೇಳುತ್ತದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.