ಬೆಂಗಳೂರು: ನ್ಯಾಯಾಂಗವು ಪ್ರಕ್ಷಬ್ದ ಹಂತವನ್ನು ಹಾದು ಹೋಗುತ್ತಿದೆ ಮತ್ತು ಅದು ದೇಶಕ್ಕೆ ಮಾರಕವಾಗಿ ಪರಿಣಮಿಸಿರುವ ಬೂಟಾಟಿಕೆಯ ಲಿಬರಲ್ಸ್ಗಳನ್ನು ತೊಡೆದುಹಾಕಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಥಿಂಕರ್ಸ್ ಫೋರಂ ಆಯೋಜನೆಗೊಳಿಸಿದ ಮೊದಲ ಅಟಲ್ ಬಿಹಾರಿ ವಾಜಪೇಯಿ ಮೆಮೋರಿಯಲ್ ಲೆಕ್ಚರನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯಾಲಯವು ನ್ಯಾಯ ಒದಗಿಸುವಿಕೆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ ಎಂದು ರಾಮಜನ್ಮಭೂಮಿ ಪ್ರಕರಣವನ್ನು ಉದಾಹರಣೆಯಾಗಿ ನೀಡಿ ಬೇಸರ ವ್ಯಕ್ತಪಡಿಸಿದರು.
ಬುದ್ಧಿಜೀವಿಗಳು ಮತ್ತು ಎನ್ಜಿಓಗಳ ಬಗ್ಗೆ ಮಾತನಾಡಿದ ಅವರು, ಇಂತಹ ಬುದ್ಧಿಜೀವಿಗಳು ದಕ್ಷಿಣ ಭಾರತವನ್ನೂ ಪ್ರತ್ಯೇಕ ದೇಶವನ್ನಾಗಿ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.
ಸವಾಲುಗಳು ಬೂಟಾಟಿಕೆಯ ಬುದ್ಧಿಜೀವಿಗಳಿಂದ ಬರುತ್ತಿದೆ. ಲೋಪದೋಷಗಳನ್ನು ವ್ಯವಸ್ಥಿತವಾಗಿ ಹೇಗೆ ಬಳಸಬೇಕು ಎಂಬುದು ಅವರಿಗೆ ತಿಳಿದಿದೆ. ನ್ಯಾಯಾಂಗ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಹೇಗೆ ನುಚ್ಚುನೂರು ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಎಂದಿದ್ದಾರೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.