ನವದೆಹಲಿ: ಶ್ರೀಮಂತರನ್ನು ಎಲ್ಪಿಜಿ ಸಬ್ಸಿಡಿ ತೊರೆಯಲು ಉತ್ತೇಜಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ‘ಗಿವ್ಇಟ್ಅಪ್’ ಅಭಿಯಾನವನ್ನು ಆರಂಭಿಸಿದ್ದರು. ಈ ಯೋಜನೆಯಡಿ ಶ್ರೀಮಂತರಾದವರು ತಮ್ಮ ಎಲ್ಪಿಜಿ ಸಬ್ಸಿಡಿಯನ್ನು ಸ್ವಯಂಪ್ರೇರಣೆಯಿಂದ ತೊರೆಯಲು ಮುಂದಾಗಿದ್ದಾರೆ.
ಈ ಅಭಿಯಾನದಡಿ ಇದುವರೆಗೆ ಸುಮಾರು 1.03 ಕೋಟಿ ಜನರು ತಮ್ಮ ಎಲ್ಪಿಜಿ ಸಬ್ಸಿಡಿಯನ್ನು ತೊರೆದಿದ್ದಾರೆ ಎಂದು ಸರ್ಕಾರ ಪ್ರಕಟನೆಯಲ್ಲಿ ತಿಳಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಎಲ್ಪಿಜಿ ದರವನ್ನು ನಿಗದಿಪಡಿಸಲಾಗುತ್ತದೆ. ಸಬ್ಸಿಡಿ ಮೊತ್ತದ ಸಂಪೂರ್ಣ ಹೊರೆಯನ್ನು ಸರ್ಕಾರವೇ ಭರಿಸುತ್ತದೆ.
source: www.pib.nic.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.