ಮುಂಬಯಿ: ಬೇಹುಗಾರಿಕೆ ಆರೋಪದ ಮೇರೆಗೆ 6 ವರ್ಷಗಳಿಂದ ಪಾಕಿಸ್ಥಾನದ ಜೈಲಿನಲ್ಲಿದ್ದ ಮುಂಬಯಿ ಮೂಲದ ಹಮೀದ್ ನೆಹಾಲ್ ಅನ್ಸಾರಿಯನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ. ಮಂಗಳವಾರ ಆತ ಭಾರತಕ್ಕೆ ವಾಪಾಸ್ ಬರುತ್ತಿದ್ದಾನೆ.
ಮೂಲಗಳ ಪ್ರಕಾರ, ವಾಘಾ ಬಾರ್ಡರ್ನಲ್ಲಿ ಹಮೀದ್ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತ ಮಾಡಲಾಗುತ್ತಿದೆ. ಈ ವೇಳೆ ಇವರ ತಂದೆ ತಾಯಿ, ಹೋರಾಟಗಾರರು ಸೇರಿದಂತೆ ಅನೇಕರು ಹಾಜರಿರಲಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ ಕಾರ್ಯಕರ್ತ ಮತ್ತು ಮಾಜಿ ಶಾಸಕ ಕೃಷ್ಣ ಹೆಗ್ಡೆಯವರು ಹಮೀದ್ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಪಾಕಿಸ್ಥಾನದ ಹೈಕಮಿಷನ್ಗೆ ತೆರಳಿ ಆತ ತವರಿಗೆ ಮರಳಲು ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಅವರು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಎಂಜಿನಿಯರ್ ಆಗಿರುವ 33 ವರ್ಷ ಹಮೀದ್ನನ್ನು ಭಾರತದ ಬೇಹುಗಾರ ಎಂದು ಆರೋಪಿಸಿ ಪಾಕಿಸ್ಥಾನ 6 ವರ್ಷಗಳಿಂದ ಜೈಲಿನಲ್ಲಿ ಇಟ್ಟಿತ್ತು. ಪ್ರೀತಿಸಿದ ಹುಡುಗಿಗಾಗಿ ಪಾಕಿಸ್ಥಾನಕ್ಕೆ ತೆರಳಿ ಆತ ಅಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎನ್ನಲಾಗಿದೆ.
ಹಮೀದ್ ಬಿಡುಗಡೆಯನ್ನು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.