ನವದೆಹಲಿ: ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನಾ ಆರಂಭಗೊಂಡು 90 ದಿನಗಳಷ್ಟೇ ಆಗಿವೆ. ಈಗಾಗಲೇ ಬರೋಬ್ಬರಿ 6 ಲಕ್ಷ ಜನರು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಬಡವರ್ಗದವರ ಪಾಲಿಗೆ ಈ ಯೋಜನೆ ಸಂಜೀವಿನಿಯಾಗಿ ಪರಿಣಮಿಸಿದೆ.
ಸೆಪ್ಟಂಬರ್ 23ರಂದು ಪ್ರಧಾನಿ ನರೇಂದ್ರ ಮೋದಿಯವರು ಜಾರ್ಖಾಂಡ್ ರಾಂಚಿಯಲ್ಲಿ ಆಯುಷ್ಮಾನ್ ಭಾರತ್ಗೆ ಚಾಲನೆಯನ್ನು ನೀಡಿದ್ದರು. ದೇಶದಾದ್ಯಂತ ಜನರ ಪ್ರಾಥಮಿಕ ಮತ್ತು ನಂತರ ಚಿಕಿತ್ಸೆಗಾಗಿ ಈ ಯೋಜನೆಯಿಂದ 800 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ.
ಯೋಜನೆ ಆರಂಭಗೊಂಡ 90 ದಿನಗಳಲ್ಲಿ 6 ಲಕ್ಷ ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವೆ ಜೆಪಿ ನಡ್ಡಾ ತಿಳಿಸಿದ್ದಾರೆ.
ದೇಶದ 10 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗಿನ ಆರೋಗ್ಯ ವಿಮೆಯನ್ನು ಕಲ್ಪಿಸುವ ಮಹತ್ವಾಕಾಂಕ್ಷೆಯಿಂದ ಅನುಷ್ಠಾನಗೊಂಡಿರುವ ಈ ಯೋಜನೆ, ಇದೀಗ ದೇಶದ ಬಡವರ ಪಾಲಿಗೆ ಸಂಜೀವಿನಿಯಾಗುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.