ಮುಂಬಯಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಸ್ಮರಣಾರ್ಥ, ಅವರ ಜನ್ಮದಿನದಂದು ಮಹಾರಾಷ್ಟ್ರ ಸರ್ಕಾರ ‘ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇಂಟರ್ನ್ಯಾಷನಲ್ ಸ್ಕೂಲ್’ಗೆ ಚಾಲನೆಯನ್ನು ನೀಡಿದೆ. ಗ್ರಾಮೀಣ ಮಕ್ಕಳಿಗಾಗಿ ಈ ಶಾಲೆಯನ್ನು ತೆರೆಯಲಾಗಿದೆ.
ಮಹಾರಾಷ್ಟ್ರ ಇಂಟರ್ನ್ಯಾಷನಲ್ ಎಜುಕೇಶನ್ ಬೋರ್ಡ್ನ ಅಧೀನದಲ್ಲಿ ಈ ಸ್ಕೂಲ್ಗಳು ಕಾರ್ಯನಿರ್ವಹಿಸಲಿದೆ. ಇದರಡಿ 13 ಜಿಲ್ಲಾ ಪರಿಷದ್ ಸ್ಕೂಲ್ಗಳು ಆರಂಭಿಕವಾಗಿ ಮಾತೃಭಾಷೆಯಲ್ಲೇ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಇದಕ್ಕೆ ಸೇರ್ಪಡೆಗೊಳ್ಳಲಿವೆ.
ಜಿಲ್ಲಾ ಪರಿಷದ್ ಸ್ಕೂಲ್ಗಳು ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಹಲವಾರು ಇಂಗ್ಲೀಷ್ ಮೀಡಿಯಂ ಶಾಲೆಯ ಮಕ್ಕಳು ಇಲ್ಲಿಗೆ ವಲಸೆ ಬರುತ್ತಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಬಡ ಮಕ್ಕಳಿಗೆ ನೀಡುವ ಸದುದ್ದೇಶದೊಂದಿಗೆ ಈ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇಲ್ಲಿ ಗ್ರಾಮೀಣ ಮಕ್ಕಳು ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ಪಡೆಯಲಿದ್ದಾರೆ.
source: m.dailyhunt.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.