ಬೆಂಗಳೂರು: ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ 2018-19ನೇ ಸಾಲಿನ ಆಂತರಿಕ ಚುನಾವಣೆ ಬೆಂಗಳೂರಿನಲ್ಲಿ ಜರುಗಿದ್ದು, ರಾಜ್ಯಾಧ್ಯಕ್ಷರಾಗಿ ಡಾ.ಅಲ್ಲಮಪ್ರಭು ಗುಡ್ಡ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಹರ್ಷ ನಾರಾಯಣ್ ಪುನರಾಯ್ಕೆಯಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯವರಾದ ಅಲ್ಲಮಪ್ರಭು ಗುಡ್ಡ ಅವರು, ವಿದ್ಯಾರ್ಥಿ ದೆಸೆಯಿಂದಲೇ ಎಬಿವಿಪಿಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಪ್ರಸ್ತುತ ಅವರು ಕಲಬುರ್ಗಿಯ ಹಿಂಗುಲಾಂಬಿಕಾ ಆಯುರ್ವೇದ ಕಾಲೇಜು ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಬಿವಿಪಿ ಕಲಬುರ್ಗಿ ನಗರ ಶಾಖೆಯ ಅಧ್ಯಕ್ಷರಾಗಿ, ಕಲಬುರ್ಗಿ ಜಿಲಾ ಪ್ರಮುಖರಾಗಿ, ವಿಭಾಗ ಪ್ರಮುಖರಾಗಿ ಮತ್ತು ರಾಜ್ಯ ಉಪಾಧ್ಯಕ್ಷರಾಗಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ರಾಜೀವ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, ಕಲಬುರ್ಗಿಯ ಶ್ರೀ ಶರಣಬಸಪ್ಪ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಭಾರತವಾಣಿ ಯೋಜನೆಯ ನಾಮನಿರ್ದೇಶಿತ ಸದಸ್ಯರಾಗಿ, ನವದೆಹಲಿಯ ಸಿಸಿಐಎಂ ಇತ್ತೀಚಿಗೆ ರಚಿಸಿರುವ ಆಯುಷ್ ಶಿಕ್ಷಣದಿಂದ ವಿದ್ಯಾರ್ಥಿಗಳ ನಿರೀಕ್ಷೆ-ಸಮೀಕ್ಷೆ ಸಮಿತಿಯ ಸದಸ್ಯರು, ಹೈದರಾಬಾದ್ ಕರ್ನಾಟಕದ ಹಿಂದುಳಿದ ಹಣೆಪಟ್ಟಿ ಕಳಚಿ ವಿಕಸನದಲ್ಲಿ ದೇಶಕ್ಕೆ ಮಾದರಿಯಾಗುವ ಕಲ್ಯಾಣ ಕರ್ನಾಟಕವಾಗಬೇಕೆಂದು ಕಾರ್ಯ ನಿರ್ವಹಿಸುತ್ತಿರುವ ವಿಕಾಸ ಅಕಾಡೆಮಿಯ ವಿಶ್ವಸ್ಥರಾಗಿದ್ದಾರೆ. ಇದೀಗ ಎಬಿವಿಪಿ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ.
ಹರ್ಷ ನಾರಾಯಣ ಅವರು ಮೂಲತಃ ಬೆಂಗಳೂರು ನಗರದವರಾಗಿದ್ದು, ಬಿ.ಕಾಂ, ಎಲ್.ಎಲ್.ಬಿ. ಶಿಕ್ಷಣದ ನಂತರ ಪ್ರಸ್ತುತ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಪಿಜಿಡಿಎಚ್ಆರ್ ವ್ಯಾಸಂಗ ಮಾಡುತ್ತಿದ್ದಾರೆ. ಎಬಿವಿಪಿಯ ಕಾಲೇಜು ಕಾರ್ಯದರ್ಶಿಯಾಗಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಸಂಚಾಲಕನಾಗಿ, ಬೆಂಗಳೂರು ಮಹಾನಗರ ಕಾರ್ಯದರ್ಶಿಯಾಗಿ, ರಾಜ್ಯ ಸಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು 2017 ರಲ್ಲಿ ಚೀನಾದಲ್ಲಿ ನಡೆದ ಬ್ರಿಕ್ಸ್ ಯೂತ್ ಸಮಿತ್ನಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದರು. ಪ್ರಸ್ತುತ ಎಬಿವಿಪಿ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.