ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಮಂಗಳೂರು ವಿಮಾನಿಲ್ದಾಣಕ್ಕೆ ಆಗಮಿಸಿದ ಅವರು ಬಳಿಕ ಹೆಲಿಕಾಫ್ಟರ್ ಮೂಲಕ ಆದಿ ಉಡುಪಿಯಲ್ಲಿನ ಹೆಲಿಪ್ಯಾಡ್ಗೆ ಬಂದಿಳಿದರು. ಅವರನ್ನು ರಾಜ್ಯಪಾಲ ವಜೂಬಾಯ್ ವಾಲಾ ಅವರು ಸ್ವಾಗತಿಸಿದರು. ಸಚಿವೆ ಜಯಮಾಲಾ ಈ ವೇಳೆ ಉಪಸ್ಥಿತರಿದ್ದರು.
ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರು ಕೃಷ್ಣ ಮಠಕ್ಕೆ ಆಗಮಿಸಿದ್ದಾರೆ.
ಕೆಲ ಕಾಲ ವಿಶ್ವೇಶ್ವತೀರ್ಥರೊಂದಿಗೆ ಮಾತುಕತೆ ನಡೆಸಿದ ಅವರು ಬಳಿಕ ಕೃಷ್ಣನ ದರ್ಶನ ಪಡೆದುಕೊಂಡರು, ಈ ವೇಳೆ ಅವರಿಗೆ ಕೃಷ್ಣನ ಮೂರ್ತಿಯನ್ನೊಳಗೊಂಡ ಪ್ರಭಾವಳಿಯನ್ನು ನೀಡಿ ಪುರಸ್ಕರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.