ನವದೆಹಲಿ: ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ವಜಾಗೊಳಿಸಲೂ ತಾನು ಹೆದರುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅಲ್ಲದೇ, ನಮಾಮಿ ಗಂಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕೆಲಸದ ವಿಷಯಕ್ಕೆ ಬಂದಾಗ ಅಧಿಕಾರಿಗಳನ್ನು ವಜಾಗೊಳಿಸಲೂ ನಾನು ಹೆಸರುವುದಿಲ್ಲ. ನಾನು ಯಾರ ಮಾತನ್ನೂ ಕೇಳುವುದಿಲ್ಲ. ಆದರೆ ಗಂಗಾ ಕಾರ್ಯವನ್ನು ಪರಿಶೀಲನೆ ನಡೆಸಿದೆ. ನಮ್ಮ ಕಾರ್ಯದರ್ಶಿ ಯುಪಿ ಸಿಂಗ್, ನಿರ್ದೇಶಕ ರಾಜೀವ್ ರಂಜನ್ ಮಿಶ್ರಾ ಅವರ ತಂಡ ಕಳೆದ ಆರು ತಿಂಗಳುಗಳಿಂದ ಅತ್ಯುತ್ತಮ ಕಾರ್ಯವನ್ನೇ ಮಾಡುತ್ತಿದೆ’ ಎಂದಿದ್ದಾರೆ.
ಗಂಗೆಯ ಉಪನದಿಗಳನ್ನು ಶುದ್ಧೀಕರಣಗೊಳಿಸಲು ಕಾರ್ಯವನ್ನು ನಮಾಮಿ ಗಂಗೆ ಯೋಜನೆಯ ಮೂಲಕ ಕಡ್ಡಾಯವಾಗಿ ಮಾಡಲಾಗುತ್ತಿದೆ. ಇದರಿಂಗಾಗಿ ತ್ಯಾಜ್ಯಗಳು ಗಂಗೆಯ ಒಡಲು ಸೇರುವುದು ಕಡಿಮೆಯಾಗಿದೆ ಎಂದಿದ್ದಾರೆ.
ಅಲ್ಲದೇ ಮುಂದಿನ ಮಾರ್ಚ್ನೊಳಗೆ ಗಂಗಾ ನದಿ ಶೇ.75ರಿಂದ 80ರಷ್ಟು ಸ್ವಚ್ಛವಾಗಲಿದೆ ಎಂದು ತಿಳಿಸಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.