ಅಹ್ಮದಾಬಾದ್: ನಿರುದ್ಯೋಗ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿರುವ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ರಾಹುಲ್ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಿಂದ ಸಾಕಷ್ಟು ಜನರು ಉದ್ಯೋಗ ಹರಸಿಕೊಂಡು ಗುಜರಾತ್ಗೆ ಬರುತ್ತಿದ್ದಾರೆ ಎಂದಿದ್ದಾರೆ.
ಗುಜರಾತ್ ಅವಕಾಶಗಳ ನಾಡು, ದೇಶದಾದ್ಯಂತದ ಜನರಿಗೆ ಇಲ್ಲಿ ಉದ್ಯೋಗಗಳು ದೊರೆಯುತ್ತವೆ. ಹಲವಾರು ರಾಜ್ಯಗಳ ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಗುಜರಾತಿನಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಇವೆ ಎಂಬುದಕ್ಕೆ ಇದುವೇ ಸಾಕ್ಷಿ ಎಂದಿದ್ದಾರೆ.
ರಾಹುಲ್ ಅವರ ಅಮೇಥಿಯಿಂದಲೂ ಸಾಕಷ್ಟು ಮಂದಿ ನಮ್ಮ ರಾಜ್ಯಕ್ಕೆ ಉದ್ಯೋಗಕ್ಕಾಗಿ ಬರುತ್ತಿದ್ದಾರೆ. ಇಂತಹುದರ ನಡುವೆಯೂ ಗುಜರಾತಿನ ಉದ್ಯೋಗ ವಾತಾವರಣದ ಬಗ್ಗೆ ರಾಹುಲ್ ಅವರು ಪ್ರಶ್ನೆಗಳನ್ನು ಎತ್ತಿರುವುದು ದುರಾದೃಷ್ಟಕರ ಎಂದಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1 ಲಕ್ಷ ಮಂದಿಗೆ ಉದ್ಯೋಗಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗುಜರಾತಿನಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ಹಲವಾರು ಸಾರಿ ರಾಹುಲ್ ಗಾಂಧಿ ಹೇಳಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.