ಶ್ರೀನಗರ: ವಾಸ್ತವ ಗಡಿರೇಖೆಯ ನೌಗಮ್ ವಲಯದಲ್ಲಿ ಭಾರತದ ಗಡಿಯೊಳಗೆ ಪ್ರವೇಶಿಸಲು ಪ್ರಯತ್ನಿಸಿದ ಪಾಕಿಸ್ಥಾನದ ಉಗ್ರರನ್ನು ಭಾರತೀಯ ಯೋಧರು ಹಿಮ್ಮೆಟ್ಟಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪಾಕ್ ಸೈನಿಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಪ್ರಕಟನೆಯಲ್ಲಿ ತಿಳಿಸಿದೆ.
ದಟ್ಟಾರಣ್ಯದಲ್ಲಿ ಮೋಟಾರ್ ಮತ್ತು ರಾಕೆಟ್ಗಳ ಸಹಾಯದಿಂದ ಗಡಿಯೊಳಗೆ ನುಸುಳುವ ಪ್ರಯತ್ನವನ್ನು ಪಾಕ್ ಸೇನೆ ಮಾಡಿತ್ತು. ತಕ್ಷಣವೇ ಇದನ್ನು ಪತ್ತೆ ಹಚ್ಚಿದ ಭಾರತೀಯ ಯೋಧರು, ಕಾರ್ಯಾಚರಣೆ ನಡೆಸಿ ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ಮೃತ ಪಾಕಿಸ್ಥಾನಿ ಯೋಧರು ದೇಹಗಳನ್ನು ವಾಪಾಸ್ ತೆಗೆದುಕೊಂಡು ಹೋಗುವಂತೆ ಪಾಕಿಸ್ಥಾನಕ್ಕೆ ತಿಳಿಸಲಾಗಿದೆ ಎಂದು ಸೇನೆ ಪ್ರಕಟನೆಯಲ್ಲಿ ತಿಳಿಸಿದೆ.
ಉಭಯ ಪಡೆಗಳ ನಡುವೆ ಕಗ್ಗತ್ತಲ ರಾತ್ರಿಯಿಡೀ ಗುಂಡಿನ ಚಕಮಕಿ ನಡೆದಿತ್ತು, ಕಾರ್ಯಾಚರಣೆ ಮುಕ್ತಾಯವಾದ ಬಳಿಕ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದ ಸೇನೆಗೆ ಇಬ್ಬರು ಪಾಕಿಸ್ಥಾನಿಯರ ಮೃತ ದೇಹ ಪತ್ತೆಯಾಗಿದೆ. ಪಾಕ್ ಸೇನೆಯ ಸಮವಸ್ತ್ರವನ್ನು ಇವರು ತೊಟ್ಟಿದ್ದರು.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.