ನವದೆಹಲಿ: ರಾಮ ಮಂದಿರ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಆರ್ಎಸ್ಎಸ್ ಸ್ವಾಗತಿಸಿದ್ದು, 3 ದಶಕಗಳ ಹಿಂದೆ ಬಿಜೆಪಿ ತೆಗೆದುಕೊಂಡ ನಿರ್ಣಯದ ಅನುಗುಣವಾಗಿಯೇ ಮೋದಿ ಹೇಳಿಕೆ ಇದೆ ಎಂದಿದೆ.
ಎಎನ್ಐ ಸುದ್ದಿ ಸಂಸ್ಥೆಗೆ ಮೋದಿ ಸಂದರ್ಶನ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ಎಸ್ಎಸ್, ‘ಮೋದಿ ನೀಡಿರುವ ಹೇಳಿಕೆ ರಾಮ ಮಂದಿರ ನಿರ್ಮಾಣದ ಬಗೆಗೆ ಸಕಾರಾತ್ಮಕವಾಗಿ ಇಟ್ಟ ಹೆಜ್ಜೆಯಾಗಿದೆ. ತನ್ನ ಅಧಿಕಾರವಧಿಯಲ್ಲೇ ರಾಮ ಮಂದಿರ ನಿರ್ಮಾಣದ ಬಗೆಗಿನ ಆಶ್ವಾಸನೆಯನ್ನು ಬಿಜೆಪಿ ಈಡೇರಿಸಲಿ ಎಂಬುದು ದೇಶದ ಜನರ ನಿರೀಕ್ಷೆಯಾಗಿದೆ’ ಎಂದಿದೆ.
‘ನ್ಯಾಯಾಂಗದ ಪ್ರಕ್ರಿಯೆ ಪೂರ್ಣಗೊಳ್ಳದೆ ರಾಮ ಮಂದಿರದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಧಾನಿಯವರು ಮಂದಿರದ ಬಗ್ಗೆ ನೀಡಿರುವ ಪ್ರತಿಕ್ರಿಯೆ ಸಕರಾತ್ಮಕವಾಗಿದೆ’ ಎಂದಿದೆ.
‘2014ರ ಚುನಾವಣಾ ಪ್ರಣಾಳಿಕೆಯಲ್ಲೂ, ಸಂವಿಧಾನದ ಚೌಕಟ್ಟಿನಲ್ಲಿ ರಾಮ ಮಂದಿರ ನಿರ್ಮಾಣದ ಎಲ್ಲಾ ಪ್ರಯತ್ನಗಳನ್ನು ಮೋದಿ ನೇತೃತ್ವದಲ್ಲಿ ಮಾಡುವುದಾಗಿ ಬಿಜೆಪಿ ಹೇಳಿತ್ತು’ ಎಂದಿದೆ.
ನ್ಯಾಯಾಂಗ ಪ್ರಕ್ರಿಯೆ ಮುಕ್ತಾಯವಾದ ಬಳಿಕ ನಮ್ಮ ಜವಾಬ್ದಾರಿ ಏನಿದೆಯೋ ಅದನ್ನು ನಾವು ಖಂಡಿತಾ ಮಾಡುತ್ತೇವೆ ಎಂದು ಮೋದಿ ಸಂದರ್ಶನದಲ್ಲಿ ಹೇಳಿದ್ದರು.
We feel that the statement by Prime Minister is a positive step in the direction of Temple Construction. The Prime Minister reiterating the resolve to construct a grand Sri Ram Temple in Ayodhya in his interview is in tune with the resolution passed by BJP at Palampur in 1989.
— RSS (@RSSorg) January 1, 2019
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.