ತಿರುವನಂತಪುರಂ: 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲವನ್ನು ಪ್ರವೇಶಿಸಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇದರ ಬೆನ್ನಲ್ಲೇ, ಮಹಿಳೆಯರ ಪ್ರವೇಶದಿಂದ ದೇಗುಲ ಅಪವಿತ್ರಗೊಂಡಿದೆ ಎಂದು ಶುದ್ಧೀಕರಣ ಪ್ರಕ್ರಿಯೆಗಾಗಿ ಶಬರಿಮಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಇಂದು ಬೆಳಗ್ಗೆ ಸುಮಾರು 3.45ರ ಸುಮಾರಿಗೆ ಇಬ್ಬರು ಮಹಿಳೆಯರು ಶಬರಿ ಗಿರಿಗೆ ತೆರಳಿ ಅಯ್ಯಪ್ಪನ ದರ್ಶನವನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮನಪ್ಪುರಂನ ಕನಕದುರ್ಗಾ ಮತ್ತು ಕಲ್ಲಿಕೋಟೆಯ ಬಿಂದು ದೇಗುಲ ಪ್ರವೇಶಿಸಿದ 40ರ ಹರೆಯದ ಮಹಿಳೆಯರು ಎನ್ನಲಾಗಿದೆ.
18 ಮೆಟ್ಟಿಲುಗಳನ್ನು ಏರದೆ, ಪರ್ಯಾಯ ಮಾರ್ಗದ ಮೂಲಕ ಇವರು ಶಬರಿಮಲೆಯನ್ನು ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಇವರ ಪ್ರವೇಶದಿಂದ ಶಬರಿಮಲೆಯ ಹೋರಾಟ ಮತ್ತಷ್ಟು ಕಾವು ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ.
ಇಂದು ಅರ್ಚಕರುಗಳು ದೇಗುಲದ ಬಾಗಿಲನ್ನು ಬಂದ್ ಮಾಡಿದ್ದು, ಶುದ್ಧೀಕರಣ ಪ್ರಕ್ರಿಯೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.