ಬೆಂಗಳೂರು: ವಿವಾದಗಳಿಂದಲೇ ಕುಖ್ಯಾತಿ ಗಳಿಸಿರುವ ಸಾಹಿತಿ ಕೆ.ಎಸ್ ಭಗವಾನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ನಂಬಿಕೆಗೆ ಅವಮಾನ)ದಡಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಚಂದ್ರ ಮತ್ತು ರಾಷ್ಟ್ರಪಿತ ಗಾಂಧೀಜಿಯ ಅವಹೇಳನಕಾರಿಯಾಗಿ ತಮ್ಮ ಪುಸ್ತಕದಲ್ಲಿ ಬರೆದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ರಾಮಮಂದಿರ ನಿರ್ಮಾಣದ ವಿರುದ್ಧ ಪುಸ್ತಕವೊಂದನ್ನು ಬರೆದಿರುವ ಇವರು, ಅದರಲ್ಲಿ ಶ್ರೀರಾಮ ಮಾಂಸ ಭಕ್ಷಣೆ, ಮದ್ಯ ಸೇವನೆ ಮಾಡುತ್ತಿದ್ದ, ಸ್ತ್ರೀ ನೃತ್ಯ ವೀಕ್ಷಿಸುತ್ತಿದ್ದ ಎಂದೆಲ್ಲ ಅಸಂಬದ್ಧವಾಗಿ ಬರೆದಿದ್ದರು. ಇದು ಭಾರೀ ವಿವಾದವನ್ನೂ ಸೃಷ್ಟಿಸಿತ್ತು. ಇನ್ನೊಂದೆಡೆ ಗಾಂಧೀಜಿ ಬಗ್ಗೆಯೂ ಅವಹೇಳನಕಾರಿಯಾಗಿ ಹೇಳಿದ್ದಾರೆ ಎನ್ನಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಮೈಸೂರಿನ ಜನಜಾಗೃತಿ ವೇದಿಕೆ ಅಧ್ಯಕ್ಷ ಜಗದೀಶ್ ಹೆಬ್ಬಾರ್ ಎಂಬುವವರು ಇವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇನ್ನೊಂದೆಡೆ ಭಗವಾನ್ ಬಗ್ಗೆ ಮೌನ ತಾಳಿರುವ ಸಿಎಂ ಕುಮಾರಸ್ವಾಮಿಯವರ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಭಗವಾನ್ ಅವರನ್ನು ಜೈಲಿಗೆ ಅಥವಾ ಹುಚ್ಚಾಸ್ಪತ್ರೆಗೆ ದಾಖಲಿಸಿ ಎಂದು ಅವರಿಗೆ ಆಗ್ರಹಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.