ನವದೆಹಲಿ: ಮುಂಬಯಿ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾದ ಕೆಲವು ಅಮೆರಿಕಾ ಮೂಲದ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಮಾತುಕತೆ ನಡೆಸಲು ಕೇಂದ್ರ ವಾಷಿಂಗ್ಟನ್ನೊಂದಿಗೆ ಸಂಪರ್ಕದಲ್ಲಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.
1997ರ ಇಂಡೋ-ಯುಎಸ್ ಗಡಿಪಾರು ಒಪ್ಪಂದದ ಅನ್ವಯ, ಮುಂಬಯಿ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದ ಕೆಲವರನ್ನು ಭಾರತಕ್ಕೆ ಕರೆ ತರಲು ಯುಎಸ್ನೊಂದಿಗೆ ಸರ್ಕಾರ ಮಾತುಕತೆಯಲ್ಲಿ ತೊಡಗಿದೆ ಎಂದಿದ್ದಾರೆ.
‘ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದು 2018ರ ಡಿ.13ರಂದು ಅಮೆರಿಕಾಗೆ ತೆರಳಿ ಅಲ್ಲಿನ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದೆ’ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ಪಾಕಿಸ್ಥಾನಿ ಅಮೆರಿಕನ್ ಡೇವಿಡ್ ಹೆಡ್ಲಿ, 2008ರ ಮುಂಬಯಿ ದಾಳಿಯಲ್ಲಿ ಭಾಗಿಯಾಗಿದ್ದ ಆರೋಪಿಯಾಗಿದ್ದು, ಪ್ರಸ್ತುತ ಆತ ಅಮೆರಿಕಾದಲ್ಲಿ 35 ವರ್ಷಗಳ ಸಜೆಯನ್ನು ಅನುಭವಿಸುತ್ತಿದ್ದಾನೆ.
ಮುಂಬಯಿ ದಾಳಿಕೋರರನ್ನು ಬಂಧಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಸಹಕರಿಸಲು, ಆ ಮೂಲಕ ಸಂತ್ರಸ್ಥರಿಗೆ ನ್ಯಾಯಕೊಡಿಸಲು ಅಮೆರಿಕಾ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಸಿಂಗ್ ಹೇಳಿದ್ದಾರೆ.
source: ndtv
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.