ಧರ್ಮಸ್ಥಳ: ಕರುನಾಡಿನ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕದ ಸಂಭ್ರಮ ಜರುಗಲಿದೆ.
39 ಅಡಿ ಎತ್ತರದ ಬಾಹುಬಲಿಯ ಮೂರ್ತಿಗೆ ಫೆ.9ರಿಂದ ಫೆ.18ರವರೆಗೆ ಮಹಾ ಮಜ್ಜನ ನೆರವೇರಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜ್ಯಪಾಲ ವಜುಭಾಯ್ ವಾಲಾ, ಸಿಎಂ ಕುಮಾರಸ್ವಾಮಿ ಮುಂತಾದ ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಚಾರ್ಯ ವರ್ಧಮಾನ್ ಸಾಗರ್ ಜೀ ಮಹರಾಜ್, ಆಚಾರ್ಯ ಪುಷ್ಪದಂತ ಸಾಗರ್ ಜಿ ಮಹರಾಜ್, ಶ್ರವಣ ಬೆಳಗೊಳದ ಸ್ವಸ್ಥಿ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಕಾರ್ಕಳ ದಾನಾಶಾಲ ಮಠದ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಮಹಾಮಸ್ತಕಾಭಿಷೇಕ ಜರುಗಲಿದೆ.
ದೇಶದ ವಿವಿಧೆಡೆಗಳ ಭಟ್ಟಾರಕರು, ಜೈನ ಮುನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಹಾತ್ಯಾಗಿಗೆ ನಮನ ಸಲ್ಲಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.