ನವದೆಹಲಿ: ಅಫ್ಘಾನಿಸ್ಥಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಹಮದುಲ್ಲಾಹ್ ಮೊಹಿಬ್ ಅವರು ಶುಕ್ರವಾರ, ರಾಷ್ಟ್ರೀಯ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆಯನ್ನು ನಡೆಸಿದ್ದು, ಯುದ್ಧ ಪೀಡಿತ ರಾಷ್ಟ್ರದ ಮರುನಿರ್ಮಾಣಕ್ಕೆ ಭಾರತ ನೀಡುತ್ತಿರುವ ಕೊಡುಗೆಗಳನ್ನು ಶ್ಲಾಘಿಸಿದರು.
ಅಫ್ಘಾನಿಸ್ಥಾನದ ಮರುನಿರ್ಮಾಣ ಪ್ರಕ್ರಿಯೆ, ಅಲ್ಲಿನ ಭದ್ರತಾ ಸನ್ನಿವೇಶಗಳ ಬಗ್ಗೆ ಮೊಹಿಬ್ ಅವರು ಅಜಿತ್ ದೋವಲ್ಗೆ ವಿವರಿಸಿದರು. ಅಲ್ಲದೇ, ಮುಂಬರುವ ಅಧ್ಯಕ್ಷೀಯ ಚುನಾವಣೆಗೆ ಅಲ್ಲಿ ಯಾವ ರೀತಿಯ ಸಿದ್ಧತೆಗಳು ನಡೆಯುತ್ತಿದೆ ಎಂಬ ಬಗ್ಗೆಯೂ ವಿವರಿಸಿದ್ದಾರೆ.
ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಮೊಹಿಬ್ ಅವರು ಗುರುವಾರ ನವದೆಹಲಿಗೆ ಬಂದಿಳಿದಿದ್ದಾರೆ.
ಅಫ್ಘಾನಿಸ್ಥಾನದ ಆರ್ಥಿಕ ಪ್ರಗತಿ, ಮರುರಚನೆ, ಮಾನವ ಸಂಪನ್ಮೂಲ ಅಭಿವೃದ್ಧಿಗೆ ಭಾರತ ನೀಡುತ್ತಿರುವ ನೆರವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು, ಅಫ್ಘಾನಿನ ರಾಷ್ಟ್ರೀಯ ಭದ್ರತಾ ಮತ್ತು ರಕ್ಷಣಾ ಪಡೆಗಳಿಗೆ ಭಾರತದಲ್ಲಿ ತರಬೇತಿ ನೀಡುತ್ತಿರುವ ಬಗ್ಗೆಯೂ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಅಫ್ಘಾನ್ಗೆ ಭಾರತ ನೀಡುತ್ತಿರುವ ಕೊಡುಗೆಗಳ ಬಗ್ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಪಹಾಸ್ಯ ಮಾಡಿದ ಬೆನ್ನಲ್ಲೇ ಮೊಹಿಬ್ ಭಾರತಕ್ಕೆ ಆಗಮಿಸಿ ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದು ಮಹತ್ವ ಪಡೆದುಕೊಂಡಿದೆ.
source: ndtv
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.