ನವದೆಹಲಿ: ಶಿಕ್ಷಣದಲ್ಲಿ ಆವಿಷ್ಕಾರಗಳು ಅತ್ಯಗತ್ಯ ಎಂದಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ಕೇವಲ ಶಿಕ್ಷಕರಿಗೆ ಮಾತ್ರ ಭಾರತದ ಶಿಕ್ಷಣ ಸನ್ನಿವೇಶವನ್ನು ಬದಲಾಯಿಸುವ ಸಾಮರ್ಥ್ಯ ಇದೆ ಎಂದು ಪ್ರತಿಪಾದಿಸಿದ್ದಾರೆ.
‘ಶೈಕ್ಷಣಿಕ ಆಡಳಿತದಲ್ಲಿ ಆವಿಷ್ಕಾರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ’ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಆವಿಷ್ಕಾರಿ ಬೋಧನಾ ಶೈಲಿಯಿಂದ ಶಿಕ್ಷಕರು ಶಿಕ್ಷಣವನ್ನು ಅತ್ಯಂತ ವಾಸ್ತವಿಕಗೊಳಿಸಲು ಸಾಧ್ಯ ಎಂದರು.
ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಅವರು, ಸುಸ್ಥಿರ ಅಭಿವೃದ್ಧಿ ಮತ್ತು ಆವಿಷ್ಕಾರಗಳಿಂದ ದೇಶ ಬೆಳೆಯುತ್ತದೆ ಎಂದು ಪ್ರತಿಪಾದಿಸಿದರು. ಅಲ್ಲದೇ, ಪ್ರಧಾನಿ ನರೇಂದ್ರ ಮೊದಿಯವರು ಇತ್ತೀಚಿಗೆ ನೀಡಿರುವ ’ಜೈ ಅನುಸಂಧಾನ್’ ಘೋಷಣೆ ಅತ್ಯಂತ ಅಗತ್ಯವಾಗಿದ್ದು, ಇದರತ್ತ ನಾವು ಕಾರ್ಯೋನ್ಮುಖರಾಗಬೇಕಾಗಿದೆ ಎಂದರು.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.