ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಒಟ್ಟು 17 ಗುಂಪುಗಳನ್ನು ರಚನೆ ಮಾಡಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಒಂದೊಂದು ಜವಾಬ್ದಾರಿಗಳನ್ನು ಒಂದೊಂದು ತಂಡ ವಹಿಸಿಕೊಳ್ಳಲಿದೆ.
ಪಕ್ಷದ ಹಿರಿಯ ಮುಖಂಡರಾದ ರಾಜನಾಥ್ ಸಿಂಗ್ ಅವರು, 20 ಸದಸ್ಯರನ್ನು ಒಳಗೊಂಡ ’ಸಂಕಲ್ಪ ಪತ್ರ’ (ಪ್ರಣಾಳಿಕೆ) ಸಮಿತಿಯ ನೇತೃತ್ವವನ್ನು ವಹಿಸಿಕೊಳ್ಳಲಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿಯವರು ಪ್ರಚಾರ ಸಮಿತಿಯ ನೇತೃತ್ವವನ್ನು ವಹಿಸಿಕೊಳ್ಳುತ್ತಿದ್ದಾರೆ.
ಸಚಿವರುಗಳಾದ ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಶ್ ಗೋಯಲ್, ಮುಖ್ತಾರ್ ಅಬ್ಬಾಸ್ ನಖ್ವಿ, ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರೂ ಪ್ರಣಾಳಿಕೆ ಸಿದ್ಧಪಡಿಸಲಿರುವ ಸಮಿತಿಯಲ್ಲಿ ಇರಲಿದ್ದಾರೆ ಅರುಣ್ ಜೇಟ್ಲಿಯೂ ಇದರಲ್ಲಿ ಇರಲಿದ್ದಾರೆ.
ಸಚಿವ ನಿತಿನ್ ಗಡ್ಕರಿಯವರು, ಸಾಮಾಜಿಕ ಮತ್ತು ಸ್ವಯಂಸೇವಕ ಸಂಘಟನೆಗಳನ್ನು ತಲುಪುವ ಜವಾಬ್ದಾರಿ ಹೊತ್ತಿರುವ ಸಮಿತಿಯ ಮುಖ್ಯಸ್ಥರಾಗಲಿದ್ದಾರೆ. ಸುಷ್ಮಾ ಸ್ವರಾಜ್ ಅವರು, ಚುನಾವಣೆಗೆ ಸಾಹಿತ್ಯಗಳನ್ನು ರಚಿಸುವ ಸಮಿತಿಯ ಹೊಣೆ ಹೊತ್ತುಕೊಳ್ಳಲಿದ್ದಾರೆ.
ರವಿಶಂಕರ್ ಪ್ರಸಾದ್ ಅವರು ಮಾಧ್ಯಮ ಸಮಿತಿಯನ್ನು, ಪ್ರಕಾಶ್ ಜಾವ್ಡೇಕರ್ ಅವರು ಪ್ರಗತಿಪರರ ಸಭೆ ಏರ್ಪಡಿಸುವ ತಂಡದ ನೇತೃತ್ವವಹಿಸಲಿದ್ದಾರೆ.
ಈ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ಶತಪ್ರಯತ್ನವನ್ನು ಬಿಜೆಪಿ ಆರಂಭಿಸಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.