ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ನೀಡುವ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸಂಪುಟ ಸಮಿತಿ ಸೋಮವಾರ ಅನುಮೋದನೆಯನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಂಪುಟದ ಒಪ್ಪಿಗೆಯ ಬಳಿಕ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ಸರ್ಕಾರ ತಿದ್ದುಪಡಿಯನ್ನು ತರಲಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಆರ್ಥಿಕವಾಗಿ ಹಿಂದುಳಿದ, ಬಡತನದಲ್ಲಿರುವ ಸಾಮಾನ್ಯ ವರ್ಗದವರಿಗೆ ಜನರಿಗೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿ ಸಿಗಲಿದೆ. ಬಡತನದಲ್ಲಿದ್ದರೂ ಸಾಮಾನ್ಯ ವರ್ಗದವರು ಎಂಬ ಕಾರಣಕ್ಕೆ ಅವಕಾಶ ವಂಚಿತರಾಗಿರುವ ಜನರಿಗೆ ಇದರಿಂದ ಪ್ರಯೋಜನವಾಗಲಿದೆ.
ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರು ಮತ್ತು 5 ಎಕರೆ ಭೂಮಿಗಿಂತ ಕಡಿಮೆ ಇರುವವರ ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.