ನವದೆಹಲಿ: ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಕಲ್ಪಿಸಿಕೊಡುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಂಬಲ ನೀಡಿದ್ದಕ್ಕಾಗಿ ಎಲ್ಲಾ ಪಕ್ಷಗಳಿಗೂ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಮಸೂದೆ ಅಂಗೀಕಾರವನ್ನು ‘ನಮ್ಮ ದೇಶದ ಇತಿಹಾಸದಲ್ಲೇ ಮಹತ್ವದ ಕ್ಷಣ’ ಎಂದು ಬಣ್ಣಿಸಿರುವ ಮೋದಿ, ಸಮಾಜದ ಎಲ್ಲಾ ವರ್ಗಗಳ ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರ ಎಂದು ವಿಶ್ಲೇಷಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಸಂವಿಧಾನದ (124ನೇ ತಿದ್ದುಪಡಿ)ಮಸೂದೆ, 2019ನ್ನು ಲೋಕಸಭೆಯಲ್ಲಿ ಅಂಗೀಕಾರಗೊಳಿಸಿದ್ದು, ನಮ್ಮ ದೇಶದ ಇತಿಹಾಸದಲ್ಲೇ ಮಹತ್ವದ ಕ್ಷಣವಾಗಿದೆ. ಸಮಾಜದ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವ ಒಂದು ಪರಿಣಾಮಕಾರಿ ಕ್ರಮವನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆಯನ್ನ ಸಾಧಿಸಲು ಪೂರಕ’ ಎಂದಿದ್ದಾರೆ.
I thank MPs from all the parties who supported The Constitution (One Hundred And Twenty-Fourth Amendment) Bill, 2019 in the Lok Sabha.
I also appreciate those MP colleagues who enriched today’s debate with their views.
— Narendra Modi (@narendramodi) January 8, 2019
ಈ ಮಸೂದೆಯನ್ನು ಅಂಗೀಕರಿಸಲು ಸಹಕರಿಸಿದ ಎಲ್ಲಾ ಸಂಸದರಿಗೂ ಧನ್ಯವಾದ, ತಮ್ಮ ಚರ್ಚೆಯ ಮೂಲಕ ಈ ಮಸೂದೆಯನ್ನು ಇನ್ನಷ್ಟು ಸಿರಿವಂತಗೊಳಿಸಿದ ನಾಯಕರಿಗೂ ಅಭಿನಂದನೆ ಎಂದಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.