ನವದೆಹಲಿ: ಸಾಮಾನ್ಯ ವರ್ಗದ ಆರ್ಥಿಕ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿಯನ್ನು ನೀಡುವ ಸಂವಿಧಾನ(ತಿದ್ದುಪಡಿ)ಕಾಯ್ದೆ 2019ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ ಮರುದಿನವೇ, ಭಾನುವಾರ ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವುದಾಗಿ ಗುಜರಾತ್ ಘೋಷಣೆ ಮಾಡಿದೆ.
ಈ ಮೂಲಕ ಹೊಸ ಮೀಸಲಾತಿ ನಿಮಯವನ್ನು ಜಾರಿಗೊಳಿಸಿದ ದೇಶ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಜನವರಿ 14ರಿಂದಲೇ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ನೀಡುತ್ತಿದ್ದೇವೆ’ ಎಂದು ಗುಜರಾತ್ ಸಿಎಂ ವಿಜಯ್ ರೂಪಾಣಿಯವರು ಘೋಷಣೆ ಮಾಡಿದ್ದಾರೆ.
ಪರಿಶೀಷ್ಟ ಜಾತಿಗಿರುವ ಶೇ.7ರಷ್ಟು ಮೀಸಲಾತಿ, ಪರಿಶಿಷ್ಟ ಪಂಗಡಕ್ಕೆ ಇರುವ ಶೇ.15ರಷ್ಟು ಮೀಸಲಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಇರುವ ಶೇ.27ರಷ್ಟು ಮೀಸಲಾತಿಗೆ ಹೆಚ್ಚುವರಿಯಾಗಿ ಈ ಶೇ.10ರಷ್ಟು ಮೀಸಲಾತಿಯನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಘೋಷಣೆ ಮಾಡಿರುವ ಉದ್ಯೋಗ ಅವಕಾಶಗಳಿಗೆ ಈ ನಿಯಮ ಅನ್ವಯವಾಗಲಿದೆ, ಆದರೆ ಮೀಸಲಾತಿ ಬಗೆಗಿನ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಬೇಕಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
source: hindusthantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.