ನವದೆಹಲಿ: ದೇಶದ 111 ಅತ್ಯಂತ ಮಹತ್ವದ ಗಡಿ ಜಿಲ್ಲೆಗಳಲ್ಲಿ ವಾಸಿಸುತ್ತಿರುವ 150 ಮಿಲಿಯನ್ ಭಾರತೀಯರು ಶೀಘ್ರದಲ್ಲೇ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ‘ಗುರುತಿನ ಚೀಟಿ’ಯನ್ನು ಪಡೆದುಕೊಳ್ಳಲಿದ್ದಾರೆ. ಇದರಿಂದ ದೇಶದ ಗಡಿಗಳಲ್ಲಿ ಭದ್ರತೆಯೂ ಬಿಗಿಗೊಳ್ಳಲಿದೆ.
ಪ್ರಸ್ತುತ ದೇಶದ ಗಡಿ ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ ಜನರು ಸಮರ್ಪಕವಾದ ಗುರುತಿನ ಚೀಟಿಯನ್ನು ಹೊಂದಿಲ್ಲದ ಕಾರಣ ಸಾಕಷ್ಟು ಕಿರುಕುಳಗಳನ್ನು ಅನುಭವಿಸುತ್ತಿದ್ದರು.
ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮದ ಮರು ರಚನಾ ಯೋಜನೆಯಡಿ ಗುರುತಿನ ಚೀಟಿಯನ್ನು ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪ್ರತಿವರ್ಷ ಕೇಂದ್ರ ಸರ್ಕಾರ ಗಡಿ ಜಿಲ್ಲೆಗಳಿಗೆ 9 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸುತ್ತದೆ. ಗಡಿ ಭಾಗಗಳ ಜನರ ಅವಶ್ಯಕತೆಗಳನ್ನು ಪೂರೈಸುವುದು ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.
ಅರುಣಾಚಲ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳಗಳು ಈ ಕಾರ್ಯಕ್ರಮದಡಿ ಹೆಚ್ಚಿನ ಫಲಾನುಭವಿಗಳನ್ನು ಹೊಂದಿವೆ.
source: hindusthantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.