ನವದೆಹಲಿ: ಪಾಕಿಸ್ಥಾನದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ನಮ್ಮ ಪಶ್ಚಿಮದ ದೇಶ ಭಯೋತ್ಪಾದಕರಿಗೆ ನಿರಂತರ ಬೆಂಬಲವನ್ನು ನೀಡುತ್ತಿದೆ ಎಂದಿದ್ದಾರೆ. ಅಲ್ಲದೇ, ಒಂದು ವೇಳೆ ಯುದ್ಧ ನಡೆಸಬೇಕಾದ ಸಂದರ್ಭ ಬಂದರೆ ಭಾರತ ಅಭೂತಪೂರ್ವ ಯಶಸ್ಸನ್ನು ಗಳಿಸಲಿದೆ ಎಂದಿದ್ದಾರೆ.
71ನೇ ಸೇನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಪರೇಡ್ನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ದೇಶವನ್ನು ಯುದ್ಧ ಮಾಡಲೇಬೇಕಾದ ಪರಿಸ್ಥಿತಿಗೆ ತಂದರೆ, ಅಭೂತಪೂರ್ವ ಯಶಸ್ಸು ನಮ್ಮದಾಗಲಿದೆ’ ಎಂದಿದ್ದಾರೆ.
ಭವಿಷ್ಯದಲ್ಲಿ ಭದ್ರತಾ ಸವಾಲುಗಳು ಸಂಕೀರ್ಣಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿರುವ ಅವರು, ಯಾವುದೇ ಅಪಾಯವನ್ನು ಎದುರಿಸುವ ಸಲುವಾಗಿ ವೃತ್ತಿಪರ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರರು.
ಚೀನಾದೊಂದಿಗಿನ ಗಡಿಯಲ್ಲಿ ಹೊಸ ನಿಯಮವನ್ನು ಅಳವಡಿಸಿಕೊಳ್ಳಲಾಗಿದ್ದು, ಉಭಯ ದೇಶಗಳ ಪಡೆಗಳು ಅಲ್ಲಿ ಶಾಂತಿಯುತ ವಾತಾವರಣವನ್ನು ನಿರ್ವಹಿಸುತ್ತಿವೆ ಎಂದಿದ್ದಾರೆ.
ಇನ್ನು ಪಾಕಿಸ್ಥಾನ ಸಮೀಪ ಗಡಿ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ, ಒಳನುಸುಳುವಿಕೆಯ ಪ್ರಯತ್ನ ಮಾಡುತ್ತಿರುವ ಶತ್ರುಗಳಿಗೆ ತಕ್ಕ ಉತ್ತರವನ್ನು ನೀಡುತ್ತಿದ್ದೇವೆ ಎಂದಿದ್ದಾರೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.