ಮುಂಬಯಿ: ಕೇಂದ್ರ ಕ್ರೀಡಾ ಸಚಿವಾಲಯ ಆಯೋಜನೆಗೊಳಿಸಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ ಕರ್ನಾಟಕದ ಈಜುಗಾರ ಶ್ರೀಹರಿ ನಟರಾಜ್ ಅವರು ಅತೀ ಹೆಚ್ಚು ಬಂಗಾರದ ಪದಕಗಳನ್ನು ಗೆಲ್ಲುವ ಮೂಲಕ ಮಹತ್ವದ ಸಾಧನೆಯನ್ನು ಮಾಡಿದ್ದಾರೆ.
ಶ್ರೀಹರಿ ಅವರು ಈಜು ಸ್ಪರ್ಧೆಗಳ ವಿವಿಧ ಕೆಟಗರಿಯಲ್ಲಿ ಒಟ್ಟು 7 ಬಂಗಾರದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮತ್ತೋರ್ವ ಕನ್ನಡಿಗ ಎಸ್ಪಿ ಲಿಖಿತ್ ಅವರು ಐದು ಬಂಗಾರದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಇಬ್ಬರು ಕನ್ನಡಿಗರು ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಚಿನ್ನದ ಪದಕ ಗೆದ್ದ ಆಟಗಾರರಾಗಿ ಹೊರಹೊಮ್ಮಿದ್ದಾರೆ.
ಪದಕಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದ್ದು, 177 ಪದಕಗಳನ್ನು ಪಡೆದುಕೊಂಡಿದೆ. ದೆಹಲಿ 121 ಪದಕಗಳನ್ನು ಗೆದ್ದು ಎರಡನೇ ಸ್ಥಾನದಲ್ಲಿದೆ, ಹರಿಯಾಣ 110 ಪದಕಗಳನ್ನು ಗೆದ್ದು 3ನೇ ಸ್ಥಾನದಲ್ಲಿದೆ.
ಶೂಟಿಂಗ್ ವಿಭಾಗದಲ್ಲಿ ಪಟಿಯಾಲ ಮೂಲದ ಸರ್ತಾಝ್ ಸಿಂಗ್ ಅವರು 50 ಮೀಟರ್ ರೈಫಲ್-3ನಲ್ಲಿ ಬಂಗಾರ ಜಯಿಸಿದ್ದಾರೆ.
ಅಂಡರ್ 21 ಹುಡುಗರ ಹಾಕಿ ಪಂದ್ಯದಲ್ಲಿ ಒರಿಸ್ಸಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.