ಭೋಪಾಲ್: ಮಧ್ಯಪ್ರದೇಶ ಸರ್ಕಾರ ರೂ.50 ಸಾವಿರ ಕೋಟಿಯ ಕೃಷಿ ಸಾಲಮನ್ನಾ ಯೋಜನೆಯನ್ನು ಘೋಷಣೆ ಮಾಡಿದೆ.
‘ಜೈ ಕಿಸಾನ್ ಋಣ್ ಮುಕ್ತಿ ಯೋಜನಾ’ವನ್ನು ಸಿಎಂ ಕಮಲ್ನಾರ್ಥ ಅವರು ಜ.15ರಂದು ಆರಂಭಿಸಿದ್ದು, 55 ಲಕ್ಷ ಸಣ್ಣ ಮತ್ತು ಮಧ್ಯಮ ರೈತರಿಗೆ ಇದರಿಂದ ಪ್ರಯೋಜನವಾಗಲಿದೆ.
ಈ ಯೋಜನೆ ಆರ್ಥಿಕತೆಯ ಮೇಲಿನ ಹೂಡಿಕೆಯಾಗಿದ್ದು, ರೈತರಿಲ್ಲದೆ ಆರ್ಥಿಕತೆ ಬಲಿಷ್ಠಗೊಳ್ಳಲಾರದು ಎಂದು ಕಮಲ್ನಾಥ್ ಹೇಳಿದ್ದಾರೆ.
55 ಲಕ್ಷ ರೈತರ ಸಾಲಮನ್ನಾಗೆ ಜ.15ರಂದು ಸಚಿವ ಸಂಪುಟ ಅನುಮೋದನೆಯನ್ನು ನೀಡಿತ್ತು.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.