ನವದೆಹಲಿ: ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ದೇಶದಲ್ಲಿ ಇಂದು ‘ಹುತಾತ್ಮರ ದಿನ’ವನ್ನು ಆಚರಿಸಲಾಗುತ್ತಿದೆ. 1948ರ ಜನವರಿ 30ರಂದು ನವದೆಹಲಿಯಲ್ಲಿ ಗಾಂಧೀಜಿಯವರ ಹತ್ಯೆಯಾಗಿತ್ತು.
ರಾಷ್ಟ್ರಪತಿ ದೇಶಕ್ಕೆ ನೀಡಿದ ಕೊಡುಗೆಯನ್ನು ಹಲವಾರು ಗಣ್ಯರು ಟ್ವಿಟರ್ ಮೂಲಕ ಸ್ಮರಿಸಿಕೊಂಡಿದ್ದಾರೆ.
‘ಹುತಾತ್ಮರ ದಿನದ ಅಂಗವಾಗಿ, ಮಹಾತ್ಮ ಗಾಂಧಿ ಮತ್ತು ಅಪಾರ ಸ್ವಾತಂತ್ರ್ಯ ಹೋರಾಟಗಾರರನ್ನು, ಸ್ವಾತಂತ್ರ್ಯಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ಗೌರವಪೂರ್ವಕವಾಗಿ ಸ್ಮರಿಸಿಕೊಳ್ಳುತ್ತೇವೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವಿಟ್ ಮಾಡಿದ್ದಾರೆ.
On Martyrs’ Day, we gratefully remember Mahatma Gandhi and the countless freedom fighters who sacrificed their all for our Independence #PresidentKovind
— President of India (@rashtrapatibhvn) January 30, 2019
ಪೂಜ್ಯ ಬಾಪು ಅವರಿಗೆ ಅವರ ಪುಣ್ಯ ತಿಥಿಯಂದು ಶತ ಶತ ನಮನ. ಪುಣ್ಯ ತಿಥಿಯಂದು ಅವರನ್ನು ಸ್ಮರಿಸುತ್ತೇವೆ. ಅವರು ತೋರಿಸಿದ ದಾರಿಯನ್ನು ಅನುಸರಿಸಲು ಮತ್ತು ಅವರ ಮೌಲ್ಯಗಳಿಗೆ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಗಾಂಧೀ ನೇತೃತ್ವದ ಸತ್ಯಾಗ್ರಹಿಗಳಿಗೆ ಈ ಸ್ಮಾರಕದ ಮೂಲಕ ಗೌರವ ಸಲ್ಲಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.
पूज्य बापू को उनकी पुण्यतिथि पर शत् शत् नमन।
Remembering Bapu on his Punya Tithi. We reiterate our commitment to follow the path shown by him and abide by the values he stood for.
— Narendra Modi (@narendramodi) January 30, 2019
ಪ್ರಧಾನಿ ನರೇಂದ್ರ ಮೋದಿಯವರು ಇಂದು ’ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕ’ವನ್ನು ಗುಜರಾತಿನ ದಂಡಿಯಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.