ಮುಂಬಯಿ: ಮಹಾರಾಷ್ಟ್ರದ ಬರ ಪೀಡಿತ ಪ್ರದೇಶಗಳಿಗಾಗಿ ಕೇಂದ್ರದ ವತಿಯಿಂದ ರೂ.4,714 ಕೋಟಿಗಳನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಮೋದಿ ಸರ್ಕಾರ ಬರಪೀಡಿತ ಪ್ರದೇಶಗಳಿಗೆ ನೀಡಿದ ಪ್ಯಾಕೇಜ್, ಒಂದು ‘ಐತಿಹಾಸಿಕ ಪ್ಯಾಕೇಜ್’ ಆಗಿದೆ, ರೈತರಿಗೆ ಇದು ದೀರ್ಘಾವಧಿಯವರೆಗೆ ಸಹಾಯ ಮಾಡಲಿದೆ ಎಂದು ಫಡ್ನವಿಸ್ ವಿವರಿಸಿದ್ದಾರೆ.
‘ನಮ್ಮ ರಾಜ್ಯದ ಬರಪೀಡಿತ ಪ್ರದೇಶಗಳಿಗಾಗಿ ಐತಿಹಾಸಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಕೃಷಿ ಸಚಿವ ರಾಧ ಮೋಹನ್ ಸಿಂಗ್ ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಏಕಕಾಲದಲ್ಲಿ ಇಷ್ಟು ಪ್ರಮಾಣದ ಪ್ಯಾಕೇಜ್ನ್ನು ಹಿಂದೆಂದೂ ಯಾವ ರಾಜ್ಯಗಳೂ, ಮಹಾರಾಷ್ಟ್ರವೂ ಕಂಡಿಲ್ಲ’ ಎಂದಿದ್ದಾರೆ.
ಮಹಾರಾಷ್ಟ್ರದ 151 ತಾಲೂಕು, 268 ರೆವೆನ್ಯೂ ಸರ್ಕಲ್, 1000 ಗ್ರಾಮಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.