ನವದೆಹಲಿ: ಬೇನಾಮಿ ಆಸ್ತಿ ತಡೆ ಕಾರ್ಯಾಚರಣೆಯನ್ನು ಆರಂಭಿಸಿರುವ ಆದಾಯ ತೆರಿಗೆ ಇಲಾಖೆ, ಇದುವರೆಗೆ ಸುಮಾರು 6,900 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಬೇನಾಮಿ ಆಸ್ತಿ ಕಾಯ್ದೆಯ ಅನ್ವಯ, ವ್ಯಕ್ತಿ ತನ್ನ ಅಥವಾ ತನ್ನ ಕುಟುಂಬದ ಹೆಸರಿನಲ್ಲಿ ಆಸ್ತಿ ಖರೀದಿ ಮಾಡದೆ, ಬೇರೆಯವರ ಹೆಸರಿನಲ್ಲಿ ಅನಾಮಧೇಯ ಮೂಲದಿಂದ ಹಣ ನೀಡಿ ಖರೀದಿ ಮಾಡುವ ಆಸ್ತಿಯನ್ನು ಬೇನಾಮಿ ಆಸ್ತಿ ಎನ್ನಲಾಗುತ್ತದೆ. ಬೇನಾಮಿ ಆಸ್ತಿ ಖರೀದಿಗೆ ಕಪ್ಪು ಹಣವನ್ನು ಹೆಚ್ಚಾಗಿ ಬಳಸಲಾಗುತ್ತದೆ. ಕೆಲವೊಮ್ಮೆ, ಆಸ್ತಿಯ ಮಾಲೀಕರಿಗೆಯೇ ತಮ್ಮ ಹೆಸರಿನಲ್ಲಿ ಆಸ್ತಿ ಇದೆ ಎಂಬುದು ತಿಳಿದಿರುವುದಿಲ್ಲ.
2016ರ ನವೆಂಬರ್ 1ರಿಂದ ಆದಾಯ ತೆರಿಗೆ ಇಲಾಖೆಯು, ಬೇನಾಮಿ ಆಸ್ತಿ ಹೊಂದಿರುವವರ ವಿರುದ್ಧ ಸಮರ ಸಾರುತ್ತಿದ್ದು, ಇದುವರೆಗೆ 6,900 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ.
ಮೋದಿ ಸರ್ಕಾರ ಬೇನಾಮಿ ತಡೆಗೆ ಹಲವಾರು ಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಆಸ್ತಿ ನೋಂದಾವಣೆಗೆ ಆಧಾರ್ ಕಡ್ಡಾಯಗೊಳಿಸಿದೆ. ಡಿಜಿಟಲ್ ವರ್ಗಾವಣೆಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.