ನವದೆಹಲಿ: ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸ್ವಚ್ಛ ಭಾರತ ಮಿಶನ್ ಗ್ರಾಮೀಣ ವತಿಯಿಂದ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಬಗೆಗಿನ ರಾಷ್ಟ್ರೀಯ ವಿಚಾರ ಸಂಕಿರಣ ಜ.30ರಿಂದ 31ರವರೆಗೆ ಜರುಗಿತು. ಇದರಲ್ಲಿ ದೇಶದಾದ್ಯಂತದ ಜಿಲ್ಲಾಧಿಕಾರಿಗಳು, ಸಿಇಓ, ಸಿಡಿಓ, ಕಾರ್ಯನಿರ್ವಾಹಕ ಎಂಜಿನಿಯರ್ಗಳು, ಇತರ ಅಧಿಕಾರಿಗಳು ಭಾಗಿಯಾಗಿದ್ದರು.
ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಚಿವಾಲಯದ ಕಾರ್ಯದರ್ಶಿ ಪರಮೇಶ್ವರನ್ ಐಯ್ಯರ್ ಅವರು, ಬಯಲು ಶೌಚಮುಕ್ತ ದೇಶ ನಿರ್ಮಾಣದ ಕಾರ್ಯ ಟ್ರ್ಯಾಕ್ನಲ್ಲಿದ್ದು, 2019ರ ಅಕ್ಟೋಬರ್ ಡೆಡ್ಲೈನ್ನೊಳಗೆ ಗುರಿ ತಲುಪಲಿದ್ದೇವೆ ಎಂದರು. ಅಲ್ಲದೇ, ಸ್ವಚ್ಛತೆಯ ಸಲುವಾಗಿ ತೆಗೆದುಕೊಂಡ ಹಲವಾರು ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು.
ಸ್ವಚ್ಛ ಭಾರತ ಅಭಿಯಾನವು ಗ್ರಾಮೀಣ ಭಾಗದಲ್ಲಿ ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸುಧಾರಿಸಿದೆ ಎಂಬ ಬಗ್ಗೆ ಅಂಕಿಅಂಶಗಳ ಸಮೇತ ವಿಚಾರ ಸಂಕಿರಣದಲ್ಲಿ ಚರ್ಚೆ ನಡೆಯಿತು. ದೇಶದಾದ್ಯಂತ ನಾವೀಣ್ಯ ಮಾದರಿಯಲ್ಲಿ ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಗಳು ನಡೆಯುತ್ತಿರುವ ಬಗ್ಗೆ ಅಭಿಪ್ರಾಯಗಳು ಮಂಡನೆಗೊಂಡವು.
ದೇಶದಲ್ಲಿ ಸ್ವಚ್ಛ ಭಾರತದಡಿ 46 ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಐಯ್ಯರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.