ನವದೆಹಲಿ: ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ನ್ನು ಮಂಡನೆಗೊಳಿಸಿದ್ದಾರೆ. ರೈತಾಪಿ ವರ್ಗ, ಮಧ್ಯಮ ವರ್ಗಕ್ಕೆ ನ್ಯಾಯ ಸಲ್ಲಿಸುವಲ್ಲಿ ಬಜೆಟ್ ಯಶಸ್ವಿಯಾಗಿದೆ.
ರೈತರಿಗಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು, ಇದರಡಿ 2 ಎಕರೆಗಿಂತ ಕಡಿಮೆ ಜಮೀನು ಹೊಂದಿರುವವ ರೈತರ ಅಕೌಂಟ್ಗೆ ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ವರ್ಗಾವಣೆಯಾಗಲಿದೆ.
ನೈಸರ್ಗಿಕ ವಿಕೋಪಕ್ಕೆ ಒಳಗಾದ ರೈತರಿಗೆ ಶೇ.2ರಷ್ಟು ಬಡ್ಡಿ ರಿಯಾಯಿತಿ. ಸಾಲ ಮರುಪಾವತಿ ಮಾಡಿದ ರೈತರಿಗೆ ಶೇ.3ರಷ್ಟು ಬಡ್ಡಿ ವಿನಾಯಿತಿ ಘೋಷಣೆ ಮಾಡಲಾಗಿದೆ, 22 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ.
ಪಶುಪಾಲನೆ, ಮೀನುಗಾರಿಕೆ ಯೋಜನೆಗೆ 750 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ ಮತ್ತು ಗೋವುಗಳ ರಕ್ಷಣೆಗಾಗಿ ‘ರಾಷ್ಟ್ರೀಯ ಕಾಮಧೇನು ಆಯೋಗ’ ಮಾಡುವುದಾಗಿ ಹೇಳಲಾಗಿದೆ.
ಇನ್ನು ನೌಕರ ವರ್ಗಕ್ಕೆ ಸಿಹಿ ಸುದ್ದಿ ಬಜೆಟ್ನಲ್ಲಿ ಸಿಕ್ಕಿದ್ದು, ಕಾರ್ಮಿಕರ ಬೋನಸ್ 7 ಸಾವಿರ ರೂ ಏರಿಕೆ, ಹೊಸ ಪೆನ್ಷನ್ ಸ್ಕೀಂ ತರಲಾಗಿದೆ, ಪಿ.ಎಫ್ ಸೇರಿದಂತೆ ಹಲವು ಉಳಿತಾಯಗಳಲ್ಲಿ ಉಳಿಸುವುದು ಸೇರಿದಂತೆ ಒಟ್ಟು 6.5 ಲಕ್ಷ ಆದಾಯದವರೆಗೂ ತೆರಿಗೆ ಬರುವುದಿಲ್ಲ, ಕೆಲಸದ ಅವಧಿಯಲ್ಲಿ ಕಾರ್ಮಿಕ ಮೃತಪಟ್ಟರೆ 6 ಲಕ್ಷದವರೆಗೂ ಪರಿಹಾರ ಸಿಗಲಿದೆ. ಇಎಸ್ಐ ಅರ್ಹತಾ ಮಿತಿ 15 ದಿಂದ 25 ಸಾವಿರಕ್ಕೆ ಏರಿಕೆಮಾಡಲಾಗಿದೆ.
ಗ್ರಾಮ ಸಡಕ್ ಯೋಜನೆಗೆ 19 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ, ಸಾಗರ ಮಾಲಾ ಯೋಜನೆಯಡಿಯಲ್ಲಿ ಬಂದರುಗಳ ಅಭಿವೃದ್ಧಿಯ ಘೋಷಣೆ ಮಾಡಲಾಗಿದೆ. ದೇಶಾದ್ಯಂತ ದಿನಕ್ಕೆ 27 ಕಿಲೋಮೀಟರ್ ಹೆದ್ದಾರಿ ರಸ್ತೆ ನಿರ್ಮಾಣದ ದಾಖಲೆ ಬರೆಯಲಾಗಿದೆ.
ಮುಂದಿನ 5 ವರ್ಷಗಳಲ್ಲಿ 1ಲಕ್ಷ ಗ್ರಾಮಗಳಲ್ಲಿ ಡಿಜಿಟಲ್ ಕ್ರಾಂತಿಗೆ ನಿರ್ಧರಿಸಲಾಗಿದೆ.
’ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್’ ಪಿಂಚಣಿ ಯೋಜನೆಗೆ ಅಸಂಘಟಿತ ವಲಯದ ನೌಕರರು ನೋಂದಾಯಿಸಿಕೊಳ್ಳಬಹುದು. 60 ವರ್ಷಗಳ ನಂತರ ತಿಂಗಳಿಗೆ ರೂ. 3000 ಪಿಂಚಣಿ ಸಿಗಲಿದೆ.
ಪ್ರತಿ ವಿದ್ಯಾರ್ಥಿ ಶಾಲೆಯಿಂದ ತನ್ನ ಹಳ್ಳಿಯ ಮನೆಯವರೆಗೂ ಬಸ್ ಸಂಪರ್ಕ ವ್ಯವಸ್ಥೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಉದ್ಯೋಗಖಾತ್ರಿ ಯೋಜನೆಗೆ ರೂ. 60 ಸಾವಿರ ಕೋಟಿ ಮೀಸಲು. ಮುದ್ರಾ ಯೋಜನೆಯಡಿ 14.5 ಕೋಟಿ ಸಾಲ ಹಂಚಲಾಗಿದೆ.
ಪ್ರಧಾನಿ ಕೌಶಲ್ಯ ಯೋಜನೆಯಡಿ 1 ಕೋಟಿಗೂ ಹೆಚ್ಚು ಯುವಕರಿಗೆ ತರಬೇತಿ ಶೇ.70 ರಷ್ಟು ಮಹಿಳೆಯರನ್ನು ಉಜ್ವಲಾ ಯೋಜನೆ ತಲುಪಲಿದೆ. 2 ಲಕ್ಷದವರೆಗಿನ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆಯನ್ನು ನೀಡಲಾಗಿದ್ದು, ರೂ.5 ಲಕ್ಷದ ವರೆಗೂ ಆದಾಯ ಹೊಂದಿರುವವರಿಗೆ ಯಾವುದೇ ತೆರಿಗೆ ಇಲ್ಲ. ಶೇ.5 ರಷ್ಟು ಇದ್ದ ತೆರಿಗೆಯನ್ನು ರದ್ದು ಗೊಳಿಸಿರುವುದಾಗಿ ಘೋಷಣೆ, ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ 10 ಸಾವಿರದಿಂದ 50 ಸಾವಿರಕ್ಕೆ ಏರಿಕೆ, 40 ಸಾವಿರ ವರೆಗಿನ ಬಡ್ಡಿ ಆದಾಯಕ್ಕೆ ತೆರಿಗೆ ವಿನಾಯಿತಿ, ಪ್ರಧಾನಮಂತ್ರಿ ಶ್ರಮ್ ಯೋಗಿ ಮಾನ್ ಧನ್ ಯೋಜನೆ ಘೋಷಣೆ ಮಾಡಲಾಗಿದೆ.
ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ 26 ವಾರಗಳಿಗೆ ಏರಿಕೆ ಮಾಡಲಾಗಿದೆ. ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ವ್ಯವಸ್ಥೆ ಗುರಿ ಹೊಂದಿರುವುದಾಗಿ ಘೋಷಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.