ನವದೆಹಲಿ: ವೈದ್ಯಕೀಯ ಚಿಕಿತ್ಸೆ ಭರಿಸಲಾಗದೆ ಸಂಕಷ್ಟಕ್ಕೀಡಾಗಿ ದೆಹಲಿಯ ಬೀದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಮಾಜಿ ಯೋಧರೊಬ್ಬರ ನೆರವಿಗೆ ಧಾವಿಸಿದ್ದಾರೆ ಕ್ರಿಕೆಟಿಗ ಗೌತಮ್ ಗಂಭೀರ್.
ಮಾಜಿ ಯೋಧನ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಗಂಭೀರ್, ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಇವರಿಗೆ ಸೇನೆಯಿಂದ ನೆರವು ಸಿಗುತ್ತಿಲ್ಲ ಎಂದಿದ್ದಾರೆ.
”ಇವರು ಮಿ.ಪೀತಾಂಬರನ್, 1965ರಿಂದ 1971ರವರೆಗೆ ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದಾರೆ. ಅದು ಅವರ ಐಡಿಯಿಂದ ದೃಢಪಡುತ್ತದೆ. ತಾಂತ್ರಿಕ ಕಾರಣದಿಂದ ಸೇನೆಯ ನೆರವು ಸಿಗುತ್ತಿಲ್ಲ” ಎಂದು ಟ್ವಿಟರ್ನಲ್ಲಿ ಗಂಭೀರ್ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ಥಾನ ನಡುವಣ ಯುದ್ಧದಲ್ಲೂ ಇವರು ಭಾಗಿಯಾಗಿದ್ದರು ಎನ್ನಲಾಗಿದೆ.
ಗಂಭೀರ್ ಟ್ವಿಟ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವಾಲಯ, ಈ ನಿಟ್ಟಿನಲ್ಲಿ ತ್ವರಿತವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದೆ. ಅಲ್ಲದೇ, ಗಂಭೀರ್ ಯೋಧರ ಬಗ್ಗೆ ತೋರಿಸಿರುವ ಮಾನವೀಯತೆಗೆ ಅಭಿನಂದನೆಗಳನ್ನು ತಿಳಿಸಿದೆ.
Thanks @adgpi for explaining in detail how they have taken care of Mr Peethabaran. From his hip replacement surgery to a monthly grant from Rajya Sainik Board, they have assisted him like their own. Grateful. Thanks @DefenceMinIndia @SpokespersonMoD pic.twitter.com/SVG8w1FMjM
— Gautam Gambhir (@GautamGambhir) February 2, 2019