ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು, ನನ್ನ ಧೈರ್ಯದ ಬಗ್ಗೆ ನಿಮ್ಮಿಂದ ಸರ್ಟಿಫಿಕೇಟ್ ಪಡೆಯುವ ಅಗತ್ಯ ನನಗಿಲ್ಲ ಎಂದಿದ್ದಾರೆ.
ಎಬಿವಿಪಿ ಮಾಜಿ ಕಾರ್ಯಕರ್ತರ ಸಮಾವೇಶದಲ್ಲಿ ದೇಶದ ಜವಾಬ್ದಾರಿಗೆ ಸಂಬಂಧಿಸಿದಂತೆ ಗಡ್ಕರಿ ನೀಡಿದ್ದ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಹುಲ್ ಅವರು, ಗಡ್ಕರಿಯವರು ಬಿಜೆಪಿಯಲ್ಲಿನ ಏಕೈಕ ಧೈರ್ಯವಂತ ನಾಯಕ ಎಂದಿದ್ದರು. ರಾಹುಲ್ ಹೇಳಿಕೆ ಗಡ್ಕರಿಯವರ ಕೆಂಗಣ್ಣಿಗೆ ಗುರಿಯಾಗಿದೆ.
ಸರಣಿ ಟ್ವೀಟ್ ಮಾಡಿರುವ ಗಡ್ಕರಿ, ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ರಾಹುಲ್ ಗಾಂಧಿ ಅವರು ಮಾಧ್ಯಮಗಳ ತಿರುಚಿದ ವರದಿಗಳನ್ನು ಬಳಸುತ್ತಿದ್ದಾರೆ ಎಂದು ಗಡ್ಕರಿ ಆರೋಪಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಹೆಚ್ಚಿನ ಶ್ರಮ ಹಾಕುತ್ತೇವೆ ಎಂದಿದ್ದಾರೆ.
‘ರಾಹುಲ್ ಜೀ ಅವರೇ ನನಗೆ ನಿಮ್ಮ ಸರ್ಟಿಫಿಕೇಟ್ನ ಅವಶ್ಯಕತೆ ಇಲ್ಲ. ಆದರೆ ರಾಷ್ಟ್ರೀಯ ಪಕ್ಷವೊಂದರ ಮುಖ್ಯಸ್ಥರಾದ ನೀವು, ನರೇಂದ್ರ ಮೋದಿಯವರನ್ನು ಟೀಕಿಸಲು ಮಾಧ್ಯಮಗಳ ತಿರುಚಿದ ವರದಿಗಳನ್ನು ಬಳಸುತ್ತಿರುವುದು ನನಗೆ ಆಶ್ಚರ್ಯವಾಗುತ್ತಿದೆ’ ಎಂದಿದ್ದಾರೆ.
ನಿಮಗೆ ಬೇರೆಯವರ ಹೆಗಲಿನ ಆಸರೆ ಬೇಕಾದಂತೆ ಮಾಡಿರುವುದು ನರೇಂದ್ರ ಮೋದಿ ಸರ್ಕಾರದ ತಾಕತ್ತು ಎನ್ನುವ ಮೂಲಕ ಕಾಂಗ್ರೆಸ್ಗೆ ಛಡಿಏಟು ನೀಡಿದ್ದಾರೆ.
‘ಮೋದಿ ಪ್ರಧಾನಿಯಾಗಿದ್ದಾರೆ ಎಂಬುದನ್ನು ಈಗಲೂ ನಿಮಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ನೀವು ಅಸಹಿಷ್ಣುತೆ ಮತ್ತು ಸಾಂವಿಧಾನಿಕ ಸಂಸ್ಥೆಯ ಮೇಲೆ ದಾಳಿಯ ಕನಸು ಕಾಣುತ್ತಿದ್ದೀರಿ, ರಾಹುಲ್ ಗಾಂಧೀ ಭವಿಷ್ಯದಲ್ಲಾದರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.