ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರುಗೊಳಿಸುವ ಯುಕೆ ಸರ್ಕಾರದ ಆದೇಶವನ್ನು ಭಾರತ ಸ್ವಾಗತಿಸಿದ್ದು, ಈ ನಿಟ್ಟಿನ ಕಾನೂನು ಪ್ರಕ್ರಿಯೆಗಳು ಆದಷ್ಟು ಬೇಗ ಮುಕ್ತಾಯಗೊಳ್ಳಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದೆ.
ವಂಚನೆ ಮತ್ತು ಹಣಕಾಸು ಅವ್ಯವಹಾರದಲ್ಲಿ ಆರೋಪಿಯಾಗಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಯುಕೆ ಗೃಹ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಆದೇಶ ನೀಡಿದ್ದಾರೆ ಎಂಬುದಾಗಿ ಲಂಡನ್ನಲ್ಲಿನ ಬ್ರಿಟಿಷ್ ಹೋಮ್ ಆಫೀಸ್ ತಿಳಿಸಿದೆ.
”ಯುಕೆ ಗೃಹ ಕಾಯದರ್ಶಿಯವರ ಆದೇಶವನ್ನು ಪರಿಶೀಲಿಸಿದ ಬಳಿಕ ಮಲ್ಯ ಗಡಿಪಾರಿಗೆ ಅಂಕಿತ ಬೀಳಲಿದೆ’ ಎಂದು ಸರ್ಕಾರ ಉನ್ನತ ಮೂಲಗಳು ತಿಳಿಸಿವೆ. ಅಲ್ಲದೇ, ಯುಕೆ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಈ ನಿಟ್ಟಿನ ಕಾನೂನು ಪ್ರಕ್ರಿಯೆ ತ್ವರಿತಗೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸುವುದಾಗಿ ಭಾರತ ಹೇಳಿದೆ.
2017ರ ಏಪ್ರಿಲ್ ನಲ್ಲಿ ಸ್ಕಾಟ್ ಲ್ಯಾಂಡ್ ಯಾರ್ಡ್ ನ್ಯಾಯಾಲಯ ಮಲ್ಯ ಅವರ ಗಡಿಪಾರಿಗೆ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಮಲ್ಯಗೆ ಜಾಮೀನು ಸಿಕ್ಕಿತ್ತು. ಆದರೆ ಈಗ, ಭಾರತಕ್ಕೆ ಹಸ್ತಾಂತರದ ಪರವಾಗಿ ಲಂಡನ್ ನ್ಯಾಯಾಲಯವು ತೀರ್ಪು ನೀಡಿದೆ. ಮಲ್ಯ ಅವರ ಗಡಿಪಾರಿಗೆ ಆದೇಶ ನೀಡಲು ಅಧಿಕೃತ ಅಧಿಕಾರ ಹೊಂದಿರುವ ಲಂಡನ್ ನ ಗೃಹ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರಿಗೆ ಅಲ್ಲಿನ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಮುಖ್ಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಭಾರತೀಯ ಬ್ಯಾಂಕುಗಳಿಗೆ ಸಾವಿರಾರು ಕೋಟಿಗಳನ್ನು ವಂಚಿಸಿ ವಿದೇಶಕ್ಕೆ ಪಲಾಯಣ ಮಾಡಿರುವ ಮಲ್ಯ ಅವರನ್ನು ಕರೆತರಲು ಭಾರತ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಶೀಘ್ರದಲ್ಲೇ ಪ್ರಯತ್ನಕ್ಕೆ ಫಲ ಸಿಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.