ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ, 2019ರ ಜನವರಿ 25ರವರೆಗೆ 15.29 ಕೋಟಿ ಸಾಲಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ.
ಮುದ್ರಾ ಯೋಜನೆಯಡಿ, ಸಣ್ಣ ಮತ್ತು ಸೂಕ್ಷ್ಮ ವ್ಯಾಪಾರ ಉದ್ಯಮಗಳಿಗೆ ಮತ್ತು ವ್ಯಕ್ತಿಗಳಿಗೆ ಅವರ ಉದ್ಯಮವನ್ನು ವಿಸ್ತರಣೆ ಮಾಡಲು ರೂ.10 ಲಕ್ಷದವರೆಗೆ ಸಾಲವನ್ನು ನೀಡಲಾಗಿದೆ.
‘2019ರ ಜನವರಿ 25ರವರೆಗೆ ಯೋಜನೆಯಡಿಯಲ್ಲಿ 15.59 ಕೋಟಿ ಸಾಲಗಳನ್ನು ನೀಡಲಾಗಿದೆ’ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಮಾಹಿತಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ತಿಳಿಸಿದ್ದಾರೆ.
ಉದ್ಯೋಗ ಸೃಷ್ಟಿಗಾಗಿ ಉದ್ಯೋಗದಾರರ ಉತ್ತೇಜನಕ್ಕಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2016-17ರಲ್ಲಿ ಪ್ರಧಾನ ಮಂತ್ರಿ ರೋಜಗಾರ್ ಪ್ರೋತ್ಸಾಹನ್ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಈ ಯೋಜನೆಯಡಿ, ಎಲ್ಲಾ ವಲಯದ ಅರ್ಹ ಉದ್ಯೋಗಿಗಳಿಗೆ ಉದ್ಯೋಗದಾತರು ನೀಡುವ ಒಟ್ಟು ಕೊಡುಗೆಯ ಶೇ.12ರಷ್ಟು ಇಪಿಎಸ್ ಮತ್ತು ಇಪಿಎಫ್ನ್ನು 2018ರ ಎಪ್ರಿಲ್ 1ರಿಂದ ಅನುಷ್ಠಾನಕ್ಕೆ ಬರುವಂತೆ ಸರ್ಕಾರವೇ ಭರಿಸಲಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.