ನವದೆಹಲಿ: ಭಾರತದ ನಂ.1 ಶ್ರೀಮಂತ ಮುಕೇಶ್ ಅಂಬಾನಿಯವರು, ದೇಶದ ನಂ.1 ಕೊಡುಗೈ ದಾನಿಯಾಗಿಯೂ ಹೊರಹೊಮ್ಮಿದ್ದಾರೆ. ರೂ.437 ಕೋಟಿಗಳನ್ನು ದಾನ ಮಾಡುವ ಮೂಲಕ ಅವರು ‘ಹುರೂನ್ ಇಂಡಿಯನ್ ಫಿಲಾಂಥ್ರೋಫಿ ಪಟ್ಟಿ 2018’ರಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪಿರಮಲ್ ಗ್ರೂಪ್ನ ಅಜಯ್ ಪಿರಮಲ್ ಅವರು, ರೂ.200 ಕೋಟಿಗಳನ್ನು ದಾನ ಮಾಡುವ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಚೀನಾದ ಹುರೂನ್ ರಿಸರ್ಚ್ ಇನ್ಸ್ಟಿಟ್ಯೂಟ್ ಈ ಪಟ್ಟಿಯನ್ನು ಸಿದ್ಧಪಡಿಸಿದ್ದು, 2017ರ ಅಕ್ಟೋಬರ್ 1ರಿಂದ 2018ರ ಸೆಪ್ಟಂಬರ್ 30ರವರೆಗೆ ಭಾರತದಲ್ಲಿ 10 ಕೋಟಿ ರೂಪಾಯಿಗಿಂತ ಹೆಚ್ಚು ದಾನಗಳನ್ನು ಮಾಡಿದವರನ್ನು ಪಟ್ಟಿಯಲ್ಲಿ ಸೇರಿಸಿದೆ.
ಸರಾಸರಿ 40 ಕೋಟಿ ರೂಪಾಯಿಗಳನ್ನು ದಾನ ಮಾಡಿದ 39 ಜನರು ಈ ಪಟ್ಟಿಯಲ್ಲಿದ್ದಾರೆ. ಇವರು ಮಾಡಿದ ಒಟ್ಟು ದಾನ ರೂ.1,560 ಕೋಟಿಯಾಗಿದೆ. ಬಹುತೇಕರು ಶಿಕ್ಷಣ ವಲಯಕ್ಕೆ ಹೆಚ್ಚಿನ ಹಣವನ್ನು ನೀಡಿದ್ದಾರೆ. ಬಳಿಕ ಆರೋಗ್ಯ, ಗ್ರಾಮೀಣ ಅಭಿವೃದ್ಧಿಗಳಿಗೆ ಹಣ ನೀಡಿದ್ದಾರೆ.
ಕೇರಳದ ನೆರೆಯ ಸಂದರ್ಭ ರಿಲಾಯನ್ಸ್ ಫೌಂಡೇಶನ್ ಮುಖ್ಯಸ್ಥೆ ನೀತಾ ಅಂಬಾನಿಯವರು 20 ಕೋಟಿ ರೂಪಾಯಿಗಳ ನೆರವನ್ನು ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.