ನವದೆಹಲಿ: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು, ಇಂದು ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಲೋಕಸಭಾದಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ನಾವು ಬಯಸುತ್ತಿದ್ದೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲು ನಡೆಸುತ್ತಿರುವ ಅವರ ಪ್ರಯತ್ನಕ್ಕೆ ನನ್ನ ಶ್ಲಾಘನೆ ಇದೆ. ಅವರು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಯಾರೊಬ್ಬರೂ ಅವರಿಗೆ ಬೆರಳು ತೋರಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಪಕ್ಕದಲ್ಲೇ ನಿಂತು, ಮುಲಾಯಂ ಅವರು ಮೋದಿಯ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.
ಮುಲಾಯಂ ಪುತ್ರ ಅಖಿಲೇಶ್ ಸಿಂಗ್ ಯಾದವ್ ಅವರು, ಬಿಜೆಪಿಗೆ ಪ್ರಬಲ ಸ್ಪರ್ಧೆಯೊಡ್ಡುವ ಉದ್ದೇಶದೊಂದಿಗೆ ದೀರ್ಘ ಅವಧಿಯ ಶತ್ರು ಬಹುಜನ ಸಮಾಜವಾದಿ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಮಾತ್ರವಲ್ಲ, ಮಹಾಘಟ್ಬಂಧನ್ ನಾಯಕರೊಂದಿಗೆ ಅವರು ಕಾಣಿಸಿಕೊಂಡು ಸದಾ ಮೋದಿಯವ ವಿರುದ್ಧ ಕಿಡಿಕಾರುತ್ತಿರುತ್ತಾರೆ. ಆದರೀಗ ಅವರ ತಂದೆ ಮುಲಾಯಂ ಮೋದಿಯ ಬಗ್ಗೆ ಶ್ಲಾಘನೆಯ ಮಾತುಗಳನ್ನಾಡಿ ಎಲ್ಲರನ್ನೂ ಆಶ್ಚರ್ಯ ಚಕಿತಗೊಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಮತ್ತು ಮುಲಾಯಂ ಸಂಬಂಧ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಮಗನೊಂದಿಗೆ ವೇದಿಕೆ ಹಂಚಿಕೊಳ್ಳದೆಯೋ ಅವರು ತುಂಬಾ ದಿನಗಳಾಗಿದೆ. ಅಲ್ಲದೇ ಬಿಜೆಪಿ ವಿರುದ್ಧ ವಾಗ್ ಪ್ರಹಾರ ನಡೆಸುವುದನ್ನೂ ಅವರು ನಿಲ್ಲಿಸಿದಂತಿದೆ. ಹೀಗಾಗಿ ಸಮಾಜವಾದಿಯಲ್ಲಿ ಯಾವುದೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.