ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೋರಾದಲ್ಲಿ ನಡೆದ 44 ಸಿಆರ್ಪಿಎಫ್ ಯೋಧರ ಅಮಾನವೀಯ ಹತ್ಯೆ ಇಡೀ ದೇಶದ ರಕ್ತ ಕುದಿಯುವಂತೆ ಮಾಡಿದೆ. ದೇಶದಾದ್ಯಂತ ಈ ಘಟನೆಗೆ ತೀವ್ರವಾದ ವಿರೋಧಗಳು ವ್ಯಕ್ತವಾಗುತ್ತಿವೆ.
ಘಟನೆಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಹಲವಾರು ಯುವಕರು ಪ್ರತಿಭಟನೆ ನಡೆಸಿದ್ದಾರೆ. ’44 ಸಿಆರ್ಪಿಎಫ್ ಜವಾನರ ಹತ್ಯೆಯನ್ನು ಖಂಡಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಅತ್ಯಂತ ನಾಚಿಗೇಡಿನ ವಿಷಯವಾಗಿದೆ. ಈ ಘಟನೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು, ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಯಬೇಕು’ ಎಂದಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದು, ವೀರ ಯೋಧರ ಸಾವಿನ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.
‘ಅತ್ಯಂತ ನೋವಿನ ಘಟನೆ, ಉಗ್ರರು ನಾಚಿಗೇಡಿನ ಕೃತ್ಯ ನಡೆಸಿದ್ದಾರೆ, ಈ ಉಗ್ರರಿಗೆ ಪಾಕಿಸ್ಥಾನ ರೊಟ್ಟಿ ನೀಡುತ್ತಿದೆ. ಪ್ರಧಾನಿ ಮೋದಿಯವರು ಆ ದೇಶಕ್ಕೆ ದಾಳಿ ನಡೆಸಿ, ಬುದ್ಧಿ ಕಲಿಸಬೇಕು ಎಂದು ನಾವು ಬಯಸುತ್ತೇವೆ’ ಎಂದಿದ್ದಾರೆ.
ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್ ಸೇರಿದಂತೆ ನಾನಾ ಭಾಗಗಳಲ್ಲಿ ಪುಲ್ವಾಮ ಆತ್ಮಾಹುತಿ ಬಾಂಬ್ ದಾಳಿಗೆ ಭಾರೀ ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ. ಹುತಾತ್ಮ ಯೋಧರ ತ್ಯಾಗಕ್ಕೆ ನ್ಯಾಯ ಒದಗಿಸಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.
ಈ ದಾಳಿಯ ಹೊಣೆಯನ್ನು ಜೈಶೇ ಮೊಹಮ್ಮದ್ ಸಂಘಟನೆ ಹೊತ್ತುಕೊಂಡಿದ್ದು, ಪಾಕಿಸ್ಥಾನದ ಮೇಲೆ ಒತ್ತಡ ಹೇರಿ ಆ ಸಂಘಟನೆಯನ್ನು ಹತ್ತಿಕ್ಕುವ ಕಾರ್ಯವನ್ನು ಭಾರತ ಮಾಡಲೇಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.