ನವದೆಹಲಿ: ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದನಾ ದಾಳಿಯ ಹಿನ್ನಲೆಯಲ್ಲಿ ಭಾರತ ಪಾಕಿಸ್ಥಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರದ ಸ್ಥಾನಮಾನವನ್ನು ಹಿಂಪಡೆದುಕೊಂಡಿದೆ. ಪಾಕಿಸ್ಥಾನ ಮೂಲಕ ಜೈಶೇ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯನ್ನು ನಡೆಸಿದ ಹಿನ್ನಲೆಯಲ್ಲಿ ಭಾರತ ಈ ಕ್ರಮಕೈಗೊಂಡಿದೆ.
ಘಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ಭದ್ರತೆ ಮೇಲಿನ ಸಂಪುಟ ಸಮಿತಿಯ ಸಭೆಯಲ್ಲಿ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲಿಯವರು, ಈ ಘಟನೆಯ ಹಿಂದೆ ಪಾಕಿಸ್ಥಾನ ಕುಮ್ಮಕ್ಕು ಇರುವ ಬಗ್ಗೆ ಸಾಕಷ್ಟು ಸಾಕ್ಷಿಗಳಿವೆ ಎಂದಿದ್ದಾರೆ. ಅಲ್ಲದೇ, ಪಾಕಿಸ್ಥಾನವನ್ನು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಸಂಪೂರ್ಣ ಮೂಲೆಗುಂಪು ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೆಜ್ಜೆಯಿಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದ್ದಾರೆ. ಪರಮಾಪ್ತ ರಾಷ್ಟ್ರದ ಸ್ಥಾನಮಾನವನ್ನೂ ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ಎರಡು ದೇಶಗಳ ನಡುವೆ ಸುಲಲಿತ ವ್ಯಾಪಾರಕ್ಕಾಗಿ ಪರಮಾಪ್ತ ರಾಷ್ಟ್ರದ ಸ್ಥಾನಮಾನವನ್ನು ನೀಡಲಾಗುತ್ತದೆ. ಇದರಡಿ ಪಾಕಿಸ್ಥಾನದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಯಾವುದೇ ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುವುದಿಲ್ಲ. 1996ರಿಂದ ಭಾರತ ವಿಶ್ವ ವ್ಯಾಪಾರ ಸಂಸ್ಥೆಯಾಗಿ ರೂಪುಗೊಂಡ ಬಳಿಕ ಪಾಕಿಸ್ಥಾನಕ್ಕೆ ಈ ಸ್ಥಾನಮಾನವನ್ನು ನೀಡಲಾಗಿದೆ. ಆದರೆ ಇದುವರೆಗೆ ಪಾಕಿಸ್ಥಾನ ಭಾರತಕ್ಕೆ ಈ ಸ್ಥಾನಮಾನವನ್ನು ನೀಡಿಲ್ಲ.
ಭಾರತ ಮತ್ತು ಪಾಕಿಸ್ಥಾನಗಳ ನಡುವೆ 2.28 ಬಿಲಿಯನ್ ಡಾಲರ್ ವಹಿವಾಟು ಇದೆ. ಭಾರತಕ್ಕೆ ಪಾಕಿಸ್ಥಾನ 137 ವಸ್ತುಗಳ ರಫ್ತು ಮಾಡುತ್ತದೆ. ಭಾರತ ಆ ದೇಶಕ್ಕೆ ಪ್ರಮುಖವಾಗಿ ಹತ್ತಿ, ರಾಸಾಯನಿಕ, ತರಕಾರಿ, ಹತ್ತಿ ಇತ್ಯಾದಿಗಳನ್ನು ರಫ್ತು ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.