ನವದೆಹಲಿ: ಪುಲ್ವಾಮದಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಗ್ಗೆ ಪಾಕಿಸ್ಥಾನವನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು, ಖ್ಯಾತ ಮನೋರಂಜನಾ ಕಾರ್ಯಕ್ರಮ ‘ದಿ ಕಪಿಲ್ ಶರ್ಮಾ ಶೋ’ನಿಂದ ಕೆಳಗಿಳಿಯುವಂತೆ ಸೂಚಿಸಲಾಗಿದೆ.
ಸಿಧು ಅವರ ಬದಲು ಹ್ಯಾಸಗಾರ್ತಿ ಅರ್ಚನಾ ಪುರನ್ ಸಿಂಗ್ ಕಾರ್ಯಕ್ರಮದಲ್ಲಿ ಇನ್ನು ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಕೆಲವೊಂದು ಸನ್ನಿವೇಶಗಳನ್ನು ಅರ್ಚನಾ ಅವರೊಂದಿಗೆಯೇ ಶೂಟ್ ಮಾಡಲಾಗಿದೆ ಎನ್ನಲಾಗಿದೆ.
ಸಿಧು ಹೇಳಿಕೆಯ ಬಳಿಕ ಟಿವಿ ಚಾನೆಲ್ ಮತ್ತು ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ, ಈ ಕಾರಣದಿಂದಾಗಿ ಸಿಧು ಅವರಿಗೆ ಕೆಳಗಿಳಿಯಲು ಸೂಚಿಸಲಾಗಿದೆ ಎಂದು ಸೋನಿ ಚಾನೆಲ್ ಮೂಲಗಳು ತಿಳಿಸಿವೆ.
’ದೇಶಗಳನ್ನು ಭಯೋತ್ಪಾದಕರ ಹೀನ ಕೃತ್ಯದ ಜವಾಬ್ದಾರರನ್ನಾಗಿಸಲು ಸಾಧ್ಯವಿಲ್ಲ, ಭಯೋತ್ಪಾದಕರಿಗೆ ಧರ್ಮ, ಜನಾಂಗವಿಲ್ಲ. ಎಲ್ಲಾ ದೇಶದಲ್ಲೂ ಭಯೋತ್ಪಾದಕರಿದ್ದಾರೆ. ಪಾಕಿಸ್ಥಾನದೊಂದಿಗೆ ಮಾತುಕತೆಯ ಮೂಲಕ ಭಾರತ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಸಿಧು ಪುಲ್ವಾಮ ದಾಳಿಯ ಬಳಿಕ ಹೇಳಿಕೆ ನೀಡಿದ್ದರು.
ಅವರ ಈ ಹೇಳಿಕೆ ಭಾರತೀಯರ ಕೆಂಗಣ್ಣಿಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದೆ. ಕಪಿಲ್ ಶರ್ಮಾ ಶೋದಿಂದ ಅವರು ಕೆಳಗಿಳಿಯಬೇಕು, ಇಲ್ಲವಾದರೆ ಶೋವನ್ನು ಬಹಿಷ್ಕರಿಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಇದರಿಂದ ಎಚ್ಚೆತ್ತುಕೊಂಡಿರುವ ಸೋನಿ ಟಿವಿ, ಕಪಿಲ್ ಶರ್ಮಾ ಶೋದಿಂದ ಸಿಧು ಅವರನ್ನು ಕೆಳಗಿಳಿಸಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ತಂದು ಕೂರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.